ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

ಬೆಳ್ತಂಗಡಿ: ಆ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಫಾ. ಆದರ್ಶ್ ಜೋಸೆಫ್ ಅವರಿಗೆ ” ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024 ” ನೀಡಿ ಗೌರವಿಸಲಾಯಿತ್ತು.

ಕೇಂದ್ರ ಸರಕಾರದ ಮಾಜಿ ಸಚಿವ ಸಂತೋಷ್ ಬಗ್ರೋಡಿಯಾ ಹಾಗೂ ಕಿರುತೆರೆ ತಾರೆ ಸುರೇಂದ್ರ ಪಾಲ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಕೋವಿಡ್ 19 ರ ಸಂದರ್ಭದಲ್ಲಿ ಗ್ರಾಮ ಮಟ್ಟದಲ್ಲಿ ಮಾಡಿದ ಸಮಾಜಸೇವೆಯನ್ನು ಸಂಸ್ಥೆ ಶ್ಲಾಘಸಿದರು. ತನ್ನ ವೈಯಕ್ತಿಕ ವಾಹನದಲ್ಲಿ ನೂರಕ್ಕೂ ಅಧಿಕ ಕೋವಿಡ್ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಸೆಂಟರ್ ಗಳಿಗೆ ಉಚಿತವಾಗಿ ರವಾನೆ ಮಾಡುವುದರ ಮೂಲಕ ಹಲವಾರು ಜನರ ಪ್ರಾಣ ಉಳಿಸುವಲ್ಲಿ ಯಶ್ವಸಿಯಾದರು. ಅದು ಅಲ್ಲದೆ ಹತ್ತು ಹಲವಾರು ಸಮಾಜಮುಖಿ ಕಾರ್ಯಕ್ರಮದಲ್ಲಿ ತನ್ನನೇ ತೊಡಗಿಸಿಕೊಂಡು ಜಾತಿ, ಧರ್ಮ ವ್ಯತ್ಯಾಸವಿಲ್ಲದೆ ಮಾಡುವ ಮಾನವ ಸೇವೆಯನ್ನು ಸಂಸ್ಥೆ ಗುರುತಿಸಿಕೊಂಡರು. ಧರ್ಮದ ಅಂತರ ಬಿಟ್ಟು ಎಲ್ಲರನ್ನು ಒಟ್ಟುಸೇರಿಸಿ ಸಮಾಜದಲ್ಲಿ ಸಾಮರಸ್ಯ ಬೆಳೆಸಬೇಕೆಂಬ ಉದ್ದೇಶದಿಂದ ಹಲವಾರು ಕಾರ್ಯಕ್ರಮದ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಮಾಜಕ್ಕೆ ಸಾರುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಾರೆ.

ಪ್ರಸ್ತುತ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಗುತ್ತಿಗಾರು ಹಾಗೂ ನೆಟ್ಟಣ ಚರ್ಚಿನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತಾರೆ.

Related posts

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್. “SAP-Software ಮೂಲಕ ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣ” ಕುರಿತು ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya
error: Content is protected !!