ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ 78ನೇಯ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯು ಉದ್ಯಮದೊಂದಿಗೆ ಹಲವಾರು ಸಮಾಜಮುಖಿ ಕೆಲಸ ಕಾರ್ಯ ಮಾಡುತ್ತ ತನ್ನದೇ ಆದ ಪ್ರಸಿದ್ದಿಯನ್ನು ಪಡೆದಿದೆ.

ದೇಶದ 78 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸುವ ಉದ್ದೇಶದಿಂದ ನಿವೃತ ವೀರ ಯೋಧರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ಅವರನ್ನು ಗೌರವಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.

ಪವರ್ ಆನ್ ಸಂಸ್ಥೆಯ ಮಾಲಕ ಶೀತಲ್ ಜೈನ್ ಅವರು ಮಾತನಾಡಿ ನಾವು ಇವತ್ತು ಅತ್ಯಂತ ಸಂತೋಷವಾಗಿರಲು ಕಾರಣ ನಮ್ಮನ್ನು ಕಾಯುತ್ತಿರುವ ನಮ್ಮ ಯೋಧರು. ಅವರನ್ನು ಗೌರವಿಸುವುದು ನಮಗೆ ಹೆಮ್ಮೆಯ ವಿಚಾರ.ಇಂದು ಇಬ್ಬರು ವೀರ ಯೋಧರನ್ನು ಗೌರವಿಸಿದ್ದು ಸಂತೋಷ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಪವರ್ ಆನ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರ್ವಹಿಸಿದರು.

Leave a Comment

error: Content is protected !!