September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ : ಲಯನ್ಸ್‌ ಕ್ಲಬ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಶ್ರೀ ಸ್ಟಾರ್ ಯುವಕ ಮಂಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಮಹಿಳಾ ಮ೦ಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಶಟಲ್ ಬ್ಯಾಡ್ಮಿಂಟನ್ ಫೌಂಡೇಶನ್ ಇವರ ಸಹಯೋಗದಲ್ಲಿ 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಲಯನ್ಸ್ ಕಪ್-2024 ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವು ಆ.17 ರಂದು ಸಂಜೆ ಗಂಟೆ 6-00ಕ್ಕೆ ಪಣೆಜಾಲು ಲಯನ್ಸ್‌ ಒಳಾ೦ಗಣ ಕ್ರೀಡಾ೦ಗಣದಲ್ಲಿ ನಡೆಯಲಿದೆ.

ಪಂದ್ಯಾಟದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ನಡೆಸಿಕೊಡಲಿದ್ದಾರೆ. ನಲವತ್ತು ವಯಸ್ಸು ಮೇಲಿನ ಮತ್ತು ಕೆಳಗಡೆ ಈ ಎರಡು ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಜನರಿಗೆ ಮಾತ್ರ ಅವಕಾಶವಿದ್ದು ಹೆಚ್ಚಿನ ಕ್ರೀಡಾ ಅಭಿಮಾನಿಗಳು ಇದರ ಅವಕಾಶ ಪಡೆದುಕೊಳ್ಳಬೇಕೆಂದು ಸಂಘಟಕರು ತಿಳಿಸಿದ್ದಾರೆ.

Related posts

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya
error: Content is protected !!