25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

ವೇಣೂರು : ಇಲ್ಲಿಯ ಮಾರಗುತ್ತು ಮನೆ ನಿವಾಸಿ, ವೇಣೂರು ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿಗಳು, ದೈವದ ಗಡಿ ಪ್ರಧಾನರಾಗಿರುವ ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ಅವರು ಹೃದಯಾಘಾತದಿಂದ ಆ.16 ರಂದು ನಿಧನರಾಗಿದ್ದಾರೆ. ಸುಮಾರು 3ದಶಕ ಕ್ಕೂ ಮಿಕ್ಕಿ ವಿಜ್ಞಾನ ದ ಅಧ್ಯಾಪಕರಾಗಿ ಜನಾನು ರಾಗಿ ಗಳಾಗಿದ್ದರು ಜೈನ ಧರ್ಮ ಹಾಗೂ ಹಿಂಧೂ ಧರ್ಮ ವಿವೇಕಾನಂದ ಚಿಂತನೆ ಗಳ ಬಗ್ಗೆ ಅಳವಾ ದ ಅಭ್ಯಾಸ ಮಾಡಿದವರು ಉತ್ತಮ ಸಂಘಟಕಧಾರ್ಮಿಕ ಉಪನ್ಯಾಸ ಕಾರ ರಾಗಿ ಜನಪ್ರಿಯ ರಾಗಿದ್ದರು ಇವರು ಪ್ರಗತಿಪರ ಕೃಷಿಕರೂ ಆಗಿ ಧಾರ್ಮಿಕ, ಸಮಾಜಸೇವೆಯಲ್ಲೇ ಸಮಯ ಕಳೆಯುತ್ತಿದ್ದರು. ಮಾರಗುತ್ತು ಮಾರವಾಂಡಿ ದೈವದ ಗಡಿ ಪ್ರದಾನರಾಗಿ ಗ್ರಾಮದ ಜನತೆಗೆ ಮಾರ್ಗದರ್ಶಕರಾಗಿದ್ದರು. ಮುದ್ದಾಡಿ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದರು. ವಿವೇಕಾನಂದ ಸೇವಾ ಟ್ರಸ್ಟ್ ಸ್ಥಾಪಿಸಿ ಸಮಾಜ ಸೇವೆಯಲ್ಲೂ ನಿರತರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ವಿಜಯರಾಜ ಅಧಿಕಾರಿ ಅವರು ಶ್ರೀ ಮಠ ದ ಶಿಷ್ಯ ವರ್ಗ ದವರಗಿದ್ದು ಸದಾ ಶ್ರೀ ಮಠ ದ ಸಂಪರ್ಕ ದಲ್ಲಿದ್ದರು ಅವರ ಅಗಲಿದ ಆತ್ಮಕ್ಕೆ ಉತ್ತಮ ಸದ್ಗತಿ ಪ್ರಾಪ್ತಿ ಯಾಗಲಿ ಅವರ ಅಗಲುವಿಕೆ ಯಿಂದ ಆಗಿರುವ ದುಃಖ್ಖ ವನ್ನು ಸಹಿಸುವ ಶಕ್ತಿ ಅವರ ಕುಟುಂಬ ವರ್ಗ ಕ್ಕೆ ಸಿಗಲಿ ಎಂದು ಶ್ರೀ ಜಿನೇಂದ್ರ ಭಗವಂತ ರಲ್ಲಿ ಪ್ರಾರ್ಥಿಸುತ್ತೇವೆ ಎಂದು ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಶ್ರೀ ಜೈನ ದಿಗಂಬರ ಜೈನ ಮಠ, ಸ್ವಸ್ತಿ ಶ್ರೀ ಭಟ್ಟಾರಕ ನಗರ ಮೂಡುಬಿದಿರೆ ತಿಳಿಸಿದ್ದಾರೆ.

Related posts

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya
error: Content is protected !!