September 6, 2026
Uncategorized

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

ವೇಣೂರು : ಇಲ್ಲಿಯ ಮಾರಗುತ್ತು ಮನೆ ನಿವಾಸಿ, ವೇಣೂರು ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿಗಳು, ದೈವದ ಗಡಿ ಪ್ರಧಾನರಾಗಿರುವ ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ಅವರು ಹೃದಯಾಘಾತದಿಂದ ಆ.16 ರಂದು ನಿಧನರಾಗಿದ್ದಾರೆ. ಸುಮಾರು 3ದಶಕ ಕ್ಕೂ ಮಿಕ್ಕಿ ವಿಜ್ಞಾನ ದ ಅಧ್ಯಾಪಕರಾಗಿ ಜನಾನು ರಾಗಿ ಗಳಾಗಿದ್ದರು ಜೈನ ಧರ್ಮ ಹಾಗೂ ಹಿಂಧೂ ಧರ್ಮ ವಿವೇಕಾನಂದ ಚಿಂತನೆ ಗಳ ಬಗ್ಗೆ ಅಳವಾ ದ ಅಭ್ಯಾಸ ಮಾಡಿದವರು ಉತ್ತಮ ಸಂಘಟಕಧಾರ್ಮಿಕ ಉಪನ್ಯಾಸ ಕಾರ ರಾಗಿ ಜನಪ್ರಿಯ ರಾಗಿದ್ದರು ಇವರು ಪ್ರಗತಿಪರ ಕೃಷಿಕರೂ ಆಗಿ ಧಾರ್ಮಿಕ, ಸಮಾಜಸೇವೆಯಲ್ಲೇ ಸಮಯ ಕಳೆಯುತ್ತಿದ್ದರು. ಮಾರಗುತ್ತು ಮಾರವಾಂಡಿ ದೈವದ ಗಡಿ ಪ್ರದಾನರಾಗಿ ಗ್ರಾಮದ ಜನತೆಗೆ ಮಾರ್ಗದರ್ಶಕರಾಗಿದ್ದರು. ಮುದ್ದಾಡಿ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದರು. ವಿವೇಕಾನಂದ ಸೇವಾ ಟ್ರಸ್ಟ್ ಸ್ಥಾಪಿಸಿ ಸಮಾಜ ಸೇವೆಯಲ್ಲೂ ನಿರತರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ವಿಜಯರಾಜ ಅಧಿಕಾರಿ ಅವರು ಶ್ರೀ ಮಠ ದ ಶಿಷ್ಯ ವರ್ಗ ದವರಗಿದ್ದು ಸದಾ ಶ್ರೀ ಮಠ ದ ಸಂಪರ್ಕ ದಲ್ಲಿದ್ದರು ಅವರ ಅಗಲಿದ ಆತ್ಮಕ್ಕೆ ಉತ್ತಮ ಸದ್ಗತಿ ಪ್ರಾಪ್ತಿ ಯಾಗಲಿ ಅವರ ಅಗಲುವಿಕೆ ಯಿಂದ ಆಗಿರುವ ದುಃಖ್ಖ ವನ್ನು ಸಹಿಸುವ ಶಕ್ತಿ ಅವರ ಕುಟುಂಬ ವರ್ಗ ಕ್ಕೆ ಸಿಗಲಿ ಎಂದು ಶ್ರೀ ಜಿನೇಂದ್ರ ಭಗವಂತ ರಲ್ಲಿ ಪ್ರಾರ್ಥಿಸುತ್ತೇವೆ ಎಂದು ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಶ್ರೀ ಜೈನ ದಿಗಂಬರ ಜೈನ ಮಠ, ಸ್ವಸ್ತಿ ಶ್ರೀ ಭಟ್ಟಾರಕ ನಗರ ಮೂಡುಬಿದಿರೆ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

Suddi Udaya

ಧರ್ಮಸ್ಥಳದ ಮೇಲೆ ಅಪಪ್ರಚಾರವನ್ನು ಸೃಷ್ಟಿಸಿರುವ ಮುಖವಾಡದ ಹಿಂದೆ ಇರುವ ಧಾರ್ಮಿಕ ವಿರೋಧಿ ಶಕ್ತಿಗಳ ವಿರುದ್ಧ ಸಿಬಿಐ ಅಥವಾ ಎನ್.ಐ.ಎ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿಪಡಿಸಿ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್ ಅಧ್ಯಕ್ಷ ಡಾ. ಸಂಪತ್ ಕುಮಾರ್ ಆಗ್ರಹ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya
error: Content is protected !!