September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

ಗುರುವಾಯನಕೆರೆ: ವಿಜ್ಞಾನ , ವಾಣಿಜ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ಶೈಕ್ಷಣಿಕ ಭೂಪಟದಲ್ಲಿ ಹೊಸ ದಾಖಲೆ ಬರೆದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಸ್ಥಳೀಯ ಕನ್ನಡ ಮಾಧ್ಯಮ ಶಾಲೆಯಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಇಲ್ಲಿಗೆ ಪೀಠೋಪಕರಣಗಳ ಖರೀದಿಗೆ ಒಂದು ಲಕ್ಷ ರೂಪಾಯಿ ಮೊತ್ತದ ಚೆಕ್ ಅನ್ನು 78 ನೆಯ ಸ್ವಾತಂತ್ರ್ಯ ಸಂಭ್ರಮ ಸಂದರ್ಭದಲ್ಲಿ ನೀಡಲಾಯಿತು.

ಗುರುವಾಯನಕೆರೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ಲತೀಫ್ ಚೆಕ್ ಸ್ವೀಕರಿಸಿದರು.
ಎಕ್ಸೆಲ್ ಪದವಿ ಪೂರ್ವ ಕಾಲೇಜು ಶಿಕ್ಷಣದ ಜೊತೆಗೆ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಟೊಂಕ ಕಟ್ಟಿರುವುದು ರಾಜ್ಯದ ಖಾಸಗಿ ಸಂಸ್ಥೆಗಳಿಗೆ ಮಾದರಿಯಾದ ಕಾರ್ಯವೆಂದು ಹೇಳಿ ಮುಖ್ಯ ಅತಿಥಿಗಳಾದ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಅಭಿನಂದಿಸಿದರು.

ಇಂತಹ ಸಮಾಜ ಮುಖಿ ಕಾರ್ಯಗಳ ಮೂಲಕ ಎಕ್ಸೆಲ್ ವಿದ್ಯಾ ಸಂಸ್ಥೆಗಳು ಜನರ ಹೃದಯ ಗೆಲ್ಲುತ್ತವೆ ಎಂದು ಇನ್ನೋರ್ವ ಅತಿಥಿ ಉದಯವಾಣಿ ಗ್ರೂಪ್ ನ ಮ್ಯಾಗಝೀನ್ಸ್ ಆಂಡ್ ಸ್ಪೆಷಲ್ ಇನಿಷಿಯೇಟಿವ್ ಉಪಾಧ್ಯಕ್ಷರಾದ ರಾಮಚಂದ್ರ ಮಿಜಾರ್ ಹೇಳಿದರು. ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಅಭಿರಾಮ್, ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಅರಮಲೆ ಬೆಟ್ಟ ಕ್ಯಾಂಪಸ್ ನ ಇನ್ ಚಾರ್ಚ್ ಪ್ರಿನ್ಸಿಪಾಲ್ ಡಾ. ಪ್ರಜ್ವಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya
error: Content is protected !!