July 23, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಸರಕಾರಿ ಪ್ರೌಢಶಾಲೆ ಮಚ್ಚಿನ 78ನೇ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಇಂದು 78ನೇ ಸ್ವಾತಂತ್ರ್ಯ ದಿನಾಚರಣೇಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್‌ಡಿಎಂಸಿ ಕಾರ್ಯಾಧ್ಯಕ್ಷರಾದ ಹೊನ್ನಪ್ಪ ಕುಲಾಲ್ ನೆರವೇರಿಸಿದರು ಇವತ್ತಿನ ಕಾರ್ಯಕ್ರಮದಲ್ಲಿ 2023-24ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಗಳಿಸಿದ 15 ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಸನ್ಮಾನಿಸಲಾಯಿತು ಹಾಗೂ ಈ ಕಾರ್ಯಕ್ರಮದಲ್ಲಿ ಪಾರಂಕಿ ದೇವಸ್ಥಾನದ ಅರ್ಚಕರಾದ ಶ್ರೀಯುತ ಶ್ರೀಧರ್ ಭಟ್ ಇವರು ಪ್ರತಿವರ್ಷದಂತೆ ಈ ವರ್ಷವೂ ಸಹ ಅತ್ಯುನ್ನತ ಶ್ರೇಣಿ ಗಳಿಸಿದ 15 ವಿದ್ಯಾರ್ಥಿಗಳಿಗೆ ಪ್ರತಿ ವಿದ್ಯಾರ್ಥಿಗೂ 2,000 ರೂಪಾಯಿ ಧನ ಸಹಾಯ ನೀಡಿ ಪ್ರೋತ್ಸಾಹದ ಮಾತುಗಳನ್ನಾಡಿದರು ಇವರಿಗೆ ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ,ವಿದ್ಯಾರ್ಥಿಗಳು, ಪೋಷಕರು,ಶಾಲಾ ಅಭಿವೃದ್ಧಿ ಸಮಿತಿಯ ವತಿಯಿಂದ ಅನಂತ ಅನಂತ ಧನ್ಯವಾದಗಳು ಕಾರ್ಯಕ್ರಮದಲ್ಲಿ SDMC ಕಾರ್ಯಾಧ್ಯಕ್ಷರು,ಶಿಕ್ಷಕವೃಂದ ಹಿರಿಯ ವಿದ್ಯಾರ್ಥಿಗಳು,ಪೋಷಕ ಬಂಧುಗಳು ಭಾಗವಹಿಸಿದ್ದರು. ಈವತ್ತಿನ ಈ ಕಾರ್ಯಕ್ರಮವನ್ನು ನಮ್ಮ ಸಂಸ್ಥೆಯ ದೈಹಿಕ ಶಿಕ್ಷಕರಾದ ಶ್ರೀಯುತ ಸುಭಾಷ್ ಚಂದ್ರ ಪಿ ಪೂಜಾರಿ ಮತ್ತು ವಿಜ್ಞಾನ ಶಿಕ್ಷಕರಾದ ಶ್ರೀಯುತ ದುರ್ಗಾ ಪ್ರಸಾದ್ ಜಿ ಇವರು ನಿರ್ವಹಿಸಿದರು ಸಮಾಜ ವಿಜ್ಞಾನ ಶಿಕ್ಷಕರಾದ ವೆಂಕಪ್ಪ ಬಿ ಇವರು ಅಭಿನಂದಿಸಿದರು.

Related posts

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya
error: Content is protected !!