26.1 C
ಪುತ್ತೂರು, ಬೆಳ್ತಂಗಡಿ
September 10, 2026
ಸಾಧಕರು

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ
ಉಡುಪಿ ಜಿಲ್ಲಾ ಪೊಲೀಸ್‌ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬೆಳ್ತಂಗಡಿಯ ವಿಜಯ ಕುಮಾರ್ ಕೆಲ್ಲ ಗುತ್ತು ಅವರನ್ನು ಬೆಂಗಳೂರಿ ನಲ್ಲಿ ಕರ್ನಾಟಕ ದ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ಐಪಿಎಸ್ ರವರು ಆ.15 ಸ್ವಾತಂತ್ರ ದಿನದಂದು ರಾಷ್ಟಪತಿ
ಪದಕ ಪಡೆದ ಬಗ್ಗೆ ಅಭಿನಂದನೆ ನೀಡಿ ಪೊಲೀಸ್ ಇಲಾಖೆ ಪರವಾಗಿ ಸ್ಮರಣಿಕೆ ಯನ್ನು ನೀಡಿ ಕುಟುಂಬದ ಸದಸ್ಯರ ಜೊತೆ ಗೌರವಿಸಿದರು. ಈ ಸಂದರ್ಭದಲ್ಲಿ ಪತ್ನಿ ಶ್ರೀಮತಿ ಸುಚಿತ್ರ ಬಿ. ಮಗಳು ಪೂರ್ವಿಕ ಇದ್ದರು.

ವಿಜಯ್ ಕುಮಾರ್ 1993ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡು, 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈವರೆಗೆ ಪಣಂಬೂರು, ಪುತ್ತೂರು ನಗರ, ಉರ್ವ, ಉಡುಪಿ ನಗರ, ಕುಂದಾಪುರ, ಉಡುಪಿ ಟ್ರಾಫಿಕ್, ಉಡುಪಿ ಮಹಿಳಾ ಠಾಣೆ ಮತ್ತು ಹಿರಿಯಡ್ಕ ಠಾಣೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. 2022ರಲ್ಲಿ ಇವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದರು. ಇವರು ಬೆಳ್ತಂಗಡಿಯ ಕೆಲ್ಲಗುತ್ತು ನಿವಾಸಿಯಾಗಿದ್ದು, ದಿ. ಗೋಪಾಲಕೃಷ್ಣ ಮತ್ತು ಶಾರದಾ ದಂಪತಿಯ ಸುಪುತ್ರರಾಗಿರುತ್ತಾರೆ.

Related posts

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರು
ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿ ಗೆ ಆಯ್ಕೆ

Suddi Udaya

ಗೇರುಕಟ್ಟೆ ದಿವಾಕರ ಆಚಾರ್ಯ ರವರಿಗೆ ಯಕ್ಷಗಾನದಲ್ಲಿ ಡಿಪ್ಲೊಮಾ ಪದವಿ ಪ್ರದಾನ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya
error: Content is protected !!