July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ ಆ.24 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ, ಬಾಲ ಕೃಷ್ಣ 4-7 ವರ್ಷ, ರಾಧಾ ಕೃಷ್ಣ 8-12 ವರ್ಷದ ಮಕ್ಕಳಿಗೆ ಮಾತ್ರ ಅವಕಾಶ. ಸ್ಪರ್ಧಾ ನೋಂದಾವಣೆಗೆ ಆಗಸ್ಟ್ 22 ಕೊನೆಯ ದಿನಾಂಕವಾಗಿದೆ.

ಸ್ಪರ್ಧೆಯ ನಿಬಂಧನೆಗಳು: ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ. ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜಾರಿರಬೇಕು. ನೋಂದಾವಣೆ ಸಮಯ ಆಧಾರ್ ಕಾರ್ಡ್ ಕಡ್ಡಾಯ. ಪ್ರತೀ ವಿಭಾಗದಲ್ಲೂ ಸ್ಪರ್ಧಿಗಳಿಗೆ 1-2 ನಿಮಿಷದ ಸಮಯಾವಕಾಶ ನೀಡಲಾಗುವುದು. ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರತಕ್ಕದ್ದು. ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು. ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಲ್ಲಾ ಸ್ಪರ್ಧಿಗಳ ಫೋಟೊ/ ವೀಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್ ನಲ್ಲಿ ಹಾಕಲಾಗುವುದು.

ನೋಂದಾವಣೆಗಾಗಿ – 9343004916 / 87925 30916

Related posts

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

Suddi Udaya
error: Content is protected !!