September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

ಕಲ್ಮಂಜ:ಕಲ್ಮಂಜ ಗ್ರಾಮ‌ಪಂಚಾಯತ್ ನ 2024-25’ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ವಿಮಲ ಇವರ ಅಧ್ಯಕ್ಷತೆಯಲ್ಲಿ ಆ.16 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಶು ವೈದ್ಯಾಧಿಕಾರಿ ವಿಶ್ವನಾಥ ಸಿ.ಎನ್ ಅವರು ಗ್ರಾಮಸಭೆಯನ್ನು ಮುನ್ನಡೆಸಿದರು.

ಹಲವಡೆ ನೀರಿನ ಪೈಪುಗಳು ಒಡೆದು ಹೋಗಿ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುವುದಿಲ್ಲ ಎಂದು ಗ್ರಾಮಸ್ಥರೊರ್ವರು ತಿಳಿಸಿದರು.

ಸಿಎ ಬ್ಯಾಂಕ್ ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ನಿರ್ಮಿಸಲು ಕಲ್ಮಂಜದಲ್ಲಿ ಸರಕಾರಿ ಜಾಗವಿದೇಯೇ ಎಂದು ಗ್ರಾಮಸ್ಥರು ಕಂದಾಯ ಇಲಾಖಾ ಅಧಿಕಾರಿಯಲ್ಲಿ ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಲ್ಲರನ್ನು ಸ್ವಾಗತಿಸಿ,ಸಭೆಗೆ ವರದಿ ಮಂಡಿಸಿದರು. ಕಾರ್ಯದರ್ಶಿ ಸರೋಜಿನಿ ಕೆ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಯನ್ನು ಸಭೆಯ ಮುಂದಿಟ್ಟರು.

ರಾಧಾಕೃಷ್ಣ ಗೌಡ, ಲೀಲಾ, ಸವಿತಾ, ಪ್ರವೀಣ, ವರದಾಕ್ಷ ಆಚಾರ್ಯ, ಎಂ.ಶ್ರೀಧರ,ಕೃಷ್ಣಮೂರ್ತಿ, ಶೋಭಾವತಿ ಉಪಸ್ಥಿತರಿದ್ದರು.

ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ,ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಬಂಟರ ಕ್ರೀಡಾಕೂಟ: ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!