ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಪಡಂಗಡಿ: ವರಮಹಾಲಕ್ಷ್ಮಿ ಪೂಜಾ ಸಮಿತಿ ರಾಷ್ಟ್ರಸೇವಿತಾ ಸಮಿತಿ . ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೋಂದಿಗೆ ಆ.16 ರಂದು ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವೃತ ಪೂಜೆಯು ತಂತ್ರಿಗಳಾದ ಮುಂಡೂರು ಗೋಪಾಲ ಕೃಷ್ಣ ಭಟ್ ಮಾಲಾಡಿ ಅವರ ನೇತ್ರತ್ವದಲ್ಲಿ ಜರಗಿತು.

ಮಧ್ಯಾಹ್ನ ರಕ್ಷಾ ಬಂಧನ ಹಾಗೂ ಧಾರ್ಮಿಕ ಸಭೆ ನಡೆಯಿತು. ಧಾರ್ಮಿಕ‌ ಉಪನ್ಯಾಸಕರಾಗಿ ಮಾನನೀಯ ಮೀನಾಕ್ಷಿ ಹೊಯ್ಸಳ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ರಾಷ್ಟ್ರ ಸೇವಿಕಾ ಸಮಿತಿ ಅವರು ವರಮಹಾಲಕ್ಷ್ಮಿ ವ್ರತದ ಬಗ್ಗೆ ಉಪನ್ಯಾಸ ನೀಡಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸಂಘಕರು ಶೀಲಾ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸುಮಲತಾ ಸಂಪತ್ ಸುವರ್ಣ ಉಪಸ್ಥಿತರಿದ್ದರು. ದಿವ್ಯ ಆಚಾರ್ಯ ಸ್ವಾಗತಿಸಿ ಸುಗುಣ ರಾವ್ ಕಾರ್ಯಕ್ರಮ ನಿರೂಪಿಸಿದರು. ಆಶಾ ಆಚಾರ್ಯ ಧನ್ಯವಾದವಿತ್ತರು.

ಕುವೆಟ್ಟು, ಓಡಿಲ್ನಾಳ, ಪಡಂಗಡಿ, ಸೋಣಂದೂರು ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya
error: Content is protected !!