ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಬಳಂಜ: ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಮತ್ತು ಮಂಜುಳಾ ದಂಪತಿಯ ನೇತೃತ್ವದಲ್ಲಿ ಶ್ರೀ ವರ ಮಹಾಲಕ್ಷ್ಮೀ ವೃತ ಪೂಜೆಯು ನಡೆಯಿತು. ಮಹಿಳೆಯರು, ಮುತ್ತೈದೆಯರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಭಾಗವಹಿಸಿದ್ದರು.

ಈ ಕ್ಷೇತ್ರಕ್ಕೆ ಹೋಗುವ ಸಂಪರ್ಕ ರಸ್ತೆಯು ಮಳೆಗಾಲದಲ್ಲಿ ಕೆಸರು ತುಂಬಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು ಭಕ್ತರು ನಡೆದುಕೊಂಡು ಬಂದು ದೇವರ ದರ್ಶನ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಯ ಸಾಲಿಯಾನ್ ರವರು ಬೇಸರ ವ್ಯಕ್ತಪಡಿಸಿದ್ದಾರೆ.

Leave a Comment

error: Content is protected !!