September 6, 2026
Uncategorized

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

ವೇಣೂರು : ಇಲ್ಲಿಯ ಮಾರಗುತ್ತು ಮನೆ ನಿವಾಸಿ, ವೇಣೂರು ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿಗಳು, ದೈವದ ಗಡಿ ಪ್ರಧಾನರಾಗಿರುವ ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ಅವರು ಹೃದಯಾಘಾತದಿಂದ ಆ.16 ರಂದು ನಿಧನರಾಗಿದ್ದಾರೆ. ಸುಮಾರು 3ದಶಕ ಕ್ಕೂ ಮಿಕ್ಕಿ ವಿಜ್ಞಾನ ದ ಅಧ್ಯಾಪಕರಾಗಿ ಜನಾನು ರಾಗಿ ಗಳಾಗಿದ್ದರು ಜೈನ ಧರ್ಮ ಹಾಗೂ ಹಿಂಧೂ ಧರ್ಮ ವಿವೇಕಾನಂದ ಚಿಂತನೆ ಗಳ ಬಗ್ಗೆ ಅಳವಾ ದ ಅಭ್ಯಾಸ ಮಾಡಿದವರು ಉತ್ತಮ ಸಂಘಟಕಧಾರ್ಮಿಕ ಉಪನ್ಯಾಸ ಕಾರ ರಾಗಿ ಜನಪ್ರಿಯ ರಾಗಿದ್ದರು ಇವರು ಪ್ರಗತಿಪರ ಕೃಷಿಕರೂ ಆಗಿ ಧಾರ್ಮಿಕ, ಸಮಾಜಸೇವೆಯಲ್ಲೇ ಸಮಯ ಕಳೆಯುತ್ತಿದ್ದರು. ಮಾರಗುತ್ತು ಮಾರವಾಂಡಿ ದೈವದ ಗಡಿ ಪ್ರದಾನರಾಗಿ ಗ್ರಾಮದ ಜನತೆಗೆ ಮಾರ್ಗದರ್ಶಕರಾಗಿದ್ದರು. ಮುದ್ದಾಡಿ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದರು. ವಿವೇಕಾನಂದ ಸೇವಾ ಟ್ರಸ್ಟ್ ಸ್ಥಾಪಿಸಿ ಸಮಾಜ ಸೇವೆಯಲ್ಲೂ ನಿರತರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ವಿಜಯರಾಜ ಅಧಿಕಾರಿ ಅವರು ಶ್ರೀ ಮಠ ದ ಶಿಷ್ಯ ವರ್ಗ ದವರಗಿದ್ದು ಸದಾ ಶ್ರೀ ಮಠ ದ ಸಂಪರ್ಕ ದಲ್ಲಿದ್ದರು ಅವರ ಅಗಲಿದ ಆತ್ಮಕ್ಕೆ ಉತ್ತಮ ಸದ್ಗತಿ ಪ್ರಾಪ್ತಿ ಯಾಗಲಿ ಅವರ ಅಗಲುವಿಕೆ ಯಿಂದ ಆಗಿರುವ ದುಃಖ್ಖ ವನ್ನು ಸಹಿಸುವ ಶಕ್ತಿ ಅವರ ಕುಟುಂಬ ವರ್ಗ ಕ್ಕೆ ಸಿಗಲಿ ಎಂದು ಶ್ರೀ ಜಿನೇಂದ್ರ ಭಗವಂತ ರಲ್ಲಿ ಪ್ರಾರ್ಥಿಸುತ್ತೇವೆ ಎಂದು ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಶ್ರೀ ಜೈನ ದಿಗಂಬರ ಜೈನ ಮಠ, ಸ್ವಸ್ತಿ ಶ್ರೀ ಭಟ್ಟಾರಕ ನಗರ ಮೂಡುಬಿದಿರೆ ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya
error: Content is protected !!