23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

ವೇಣೂರು : ಇಲ್ಲಿಯ ಮಾರಗುತ್ತು ಮನೆ ನಿವಾಸಿ, ವೇಣೂರು ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿಗಳು, ದೈವದ ಗಡಿ ಪ್ರಧಾನರಾಗಿರುವ ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ಅವರು ಹೃದಯಾಘಾತದಿಂದ ಆ.16 ರಂದು ನಿಧನರಾಗಿದ್ದಾರೆ. ಸುಮಾರು 3ದಶಕ ಕ್ಕೂ ಮಿಕ್ಕಿ ವಿಜ್ಞಾನ ದ ಅಧ್ಯಾಪಕರಾಗಿ ಜನಾನು ರಾಗಿ ಗಳಾಗಿದ್ದರು ಜೈನ ಧರ್ಮ ಹಾಗೂ ಹಿಂಧೂ ಧರ್ಮ ವಿವೇಕಾನಂದ ಚಿಂತನೆ ಗಳ ಬಗ್ಗೆ ಅಳವಾ ದ ಅಭ್ಯಾಸ ಮಾಡಿದವರು ಉತ್ತಮ ಸಂಘಟಕಧಾರ್ಮಿಕ ಉಪನ್ಯಾಸ ಕಾರ ರಾಗಿ ಜನಪ್ರಿಯ ರಾಗಿದ್ದರು ಇವರು ಪ್ರಗತಿಪರ ಕೃಷಿಕರೂ ಆಗಿ ಧಾರ್ಮಿಕ, ಸಮಾಜಸೇವೆಯಲ್ಲೇ ಸಮಯ ಕಳೆಯುತ್ತಿದ್ದರು. ಮಾರಗುತ್ತು ಮಾರವಾಂಡಿ ದೈವದ ಗಡಿ ಪ್ರದಾನರಾಗಿ ಗ್ರಾಮದ ಜನತೆಗೆ ಮಾರ್ಗದರ್ಶಕರಾಗಿದ್ದರು. ಮುದ್ದಾಡಿ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದರು. ವಿವೇಕಾನಂದ ಸೇವಾ ಟ್ರಸ್ಟ್ ಸ್ಥಾಪಿಸಿ ಸಮಾಜ ಸೇವೆಯಲ್ಲೂ ನಿರತರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ವಿಜಯರಾಜ ಅಧಿಕಾರಿ ಅವರು ಶ್ರೀ ಮಠ ದ ಶಿಷ್ಯ ವರ್ಗ ದವರಗಿದ್ದು ಸದಾ ಶ್ರೀ ಮಠ ದ ಸಂಪರ್ಕ ದಲ್ಲಿದ್ದರು ಅವರ ಅಗಲಿದ ಆತ್ಮಕ್ಕೆ ಉತ್ತಮ ಸದ್ಗತಿ ಪ್ರಾಪ್ತಿ ಯಾಗಲಿ ಅವರ ಅಗಲುವಿಕೆ ಯಿಂದ ಆಗಿರುವ ದುಃಖ್ಖ ವನ್ನು ಸಹಿಸುವ ಶಕ್ತಿ ಅವರ ಕುಟುಂಬ ವರ್ಗ ಕ್ಕೆ ಸಿಗಲಿ ಎಂದು ಶ್ರೀ ಜಿನೇಂದ್ರ ಭಗವಂತ ರಲ್ಲಿ ಪ್ರಾರ್ಥಿಸುತ್ತೇವೆ ಎಂದು ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಶ್ರೀ ಜೈನ ದಿಗಂಬರ ಜೈನ ಮಠ, ಸ್ವಸ್ತಿ ಶ್ರೀ ಭಟ್ಟಾರಕ ನಗರ ಮೂಡುಬಿದಿರೆ ತಿಳಿಸಿದ್ದಾರೆ.

Related posts

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್-ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya
error: Content is protected !!