ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ : ತಾಲೂಕು ಆಡಳಿತದಿಂದ ಆಡಳಿತ ಸೌಧದ ಮುಂಭಾಗದಲ್ಲಿ ನಡೆದ ಸ್ವಾತಂತ್ರೋತ್ಸವದ ಕಾರ್ಯಕ್ರಮದಲ್ಲಿ,ಶಾಸಕ ಹರೀಶ್ ಪೂಂಜ ಈ ದೇಶಕ್ಕೆ ಕೇವಲ ಶಾಂತಿಯಿಂದ ಕೇವಲ ಚರಕ ತಿರುಗಿಸಿದರಿಂದ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿಲ್ಲ. ಸರ್ಕಾರಿ ಅಧಿಕೃತ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಸಮಾಜದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸುತ್ತಾರೆ ಎಂದು ಅಪಾದಿಸಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಸಿಪಿಐಎಮ್ ಮುಖಂಡ ಬಿ.ಎಮ್ ಭಟ್ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ,ಅರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸೆಬಾಸ್ಟಿಯನ್ ,ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ ,ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಅಮೀನ್ , ಹಾಗೂ ಪಕ್ಷದ ಪ್ರಮುಖರಾದ ಸದಾನಂದ ನಾಲ್ಕೂರು ಉಪಸ್ಥಿತರಿದ್ದರು.

Related posts

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!