July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ : ತಾಲೂಕು ಆಡಳಿತದಿಂದ ಆಡಳಿತ ಸೌಧದ ಮುಂಭಾಗದಲ್ಲಿ ನಡೆದ ಸ್ವಾತಂತ್ರೋತ್ಸವದ ಕಾರ್ಯಕ್ರಮದಲ್ಲಿ,ಶಾಸಕ ಹರೀಶ್ ಪೂಂಜ ಈ ದೇಶಕ್ಕೆ ಕೇವಲ ಶಾಂತಿಯಿಂದ ಕೇವಲ ಚರಕ ತಿರುಗಿಸಿದರಿಂದ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿಲ್ಲ. ಸರ್ಕಾರಿ ಅಧಿಕೃತ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಸಮಾಜದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸುತ್ತಾರೆ ಎಂದು ಅಪಾದಿಸಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಸಿಪಿಐಎಮ್ ಮುಖಂಡ ಬಿ.ಎಮ್ ಭಟ್ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ,ಅರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸೆಬಾಸ್ಟಿಯನ್ ,ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ ,ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಅಮೀನ್ , ಹಾಗೂ ಪಕ್ಷದ ಪ್ರಮುಖರಾದ ಸದಾನಂದ ನಾಲ್ಕೂರು ಉಪಸ್ಥಿತರಿದ್ದರು.

Related posts

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

Suddi Udaya

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ನೆರಿಯ: ರಬ್ಬರ್ ತೋಟದಲ್ಲಿ ಚಿರತೆ ಓಡಾಟ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!