July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಉಜಿರೆ: ಪ್ರತಿಯೊಂದು ಪ್ರದೇಶಕ್ಕೂ ತನ್ನದೇ ಆದ ಸಂಸ್ಕೃತಿ ಹಾಗೂ ಸಂಪ್ರದಾಯಗಳು ಇವೆ. ಇವತ್ತು ನಾವು ನಮ್ಮ ಮೂಲ ಸಂಸ್ಕೃತಿಯನ್ನು ಮರೆತು ಅನ್ಯ ಸಂಸ್ಕೃತಿಗೆ ಮಾರುಹೋಗುತ್ತಿದ್ದೇವೆ . ಕುಂದಾಪುರ ಭಾಗದ ನೆಲದ ಸಂಸ್ಕೃತಿ , ಭಾಷೆ , ಉತ್ಸವಗಳು ವಿಶಿಷ್ಟವಾಗಿ ನಿಲ್ಲುತ್ತವೆ. ಕುಂದಾಪ್ರ ಭಾಷೆಯ ಸೊಗಡು ಅನನ್ಯವಾದುದು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸಂಹಿಕ ಭಾಷಾ ವೇದಿಕೆಯ ವತಿಯಿಂದ ನಡೆದ ಕುಂದಾಪ್ರ ಕನ್ನಡ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು. ಕುಂದಾಪ್ರ ಭಾಷೆ , ಸಂಸ್ಕೃತಿ , ಆಚಾರ ವಿಚಾರಗಳ ಬಗ್ಗೆ ರಾಜ್ಯಪ್ರಶಸ್ತಿ ಪುರಸ್ಕೃತ ಬಿ.ಸೋಮಶೇಖರ ಶೆಟ್ಟಿ , ಎಸ್ ಡಿ ಎಂ ಪದವಿ ಕಾಲೇಜಿನ ಉಪನ್ಯಾಸಕರಾದ ಹರೀಶ್ ಶೆಟ್ಟಿ , ಅಭಿಜ್ಞಾ ಉಪಾಧ್ಯಾಯ , ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಅಧಿಕಾರಿ ಪ್ರದೀಪಕುಮಾರ್ಶೆಟ್ಟಿಯವರು ಮಾತನಾಡಿದರು.

ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಉಪಸ್ಥಿತರಿದ್ದರು. ಅಶ್ಮಿತಾ ಸ್ವಾಗತಿಸಿ , ಪ್ರಥ್ವಿ ಹೆಗಡೆ ವಂದಿಸಿದರು. ರಾ. ಸೇ. ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಉಪನ್ಯಾಸಕಿ ಅಮೃತಾ ಶೆಟ್ಟಿ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕುಂದಾಪ್ರ ಕನ್ನಡ ಭಿತ್ತಿಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು ಹಾಗೂ ಅಂಕಿತಾ ಬಳಗ , ಅಪರ್ಣಾ ಬಳಗ ಹಾಗೂ ಸುಭಾಷ್ ಶೆಟ್ಟಿ ಬಳಗದವರಿಂದ ಕುಂದಾಪ್ರ ಕನ್ನಡದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಅಳದಂಗಡಿಯಲ್ಲಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು: ಶಾಸಕ ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya
error: Content is protected !!