ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ವೇಣೂರು,: ಬೆಳ್ತಂಗಡಿ ತಾಲೂಕಿನ ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆ. 16ರಂದು ಸಿಂಹ ಸಂಕ್ರಮಣ ಹಾಗೂ ಆಟಿ ಕೋಲವು ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ ಕುಮಾರ್ ಅವರ ಉಪಸ್ಥಿತಿಯಲ್ಲಿ ವೇ. ಮೂ. ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರಗಿತು.

ಸಂಕ್ರಮಣ ಪ್ರಯುಕ್ತ ಬೆಳಿಗ್ಗೆ ಶ್ರೀ ದೈವಕ್ಕೆ ಹೂವಿನ ಪೂಜೆ ಸೇವೆ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

ಆಟಿ ತಿಂಗಳ ನಿಮಿತ್ತ ಸಂಜೆ ಕ್ಷೇತ್ರದಲ್ಲಿ ಶ್ರೀ ದೈವಕ್ಕೆ ಆಟಿಕೋಲ ಮತ್ತು ತುಲಾಭಾರ ಸೇವೆ ಜರಗಿತು.

ಶ್ರೀ ಕ್ಷೇತ್ರದ ವಿಕಾಸ್ ಜೈನ್ ಹಾಗೂ ವಿಶ್ವಾಸ್ ಜೈನ್ ಎಲ್ಲರನ್ನು ಬರಮಾಡಿಕೊಂಡರು. ಸಾಂಪ್ರದಾಯಿಕವಾಗಿ ನಡೆದ ಆಟಿ ಕೋಲದಲ್ಲಿ ಮಾಗಣೆ, ಗುತ್ತು ಬರ್ಕೆಯವರು, ಗುರಿಕಾರರು ಹಾಗೂ ನೂರಾರು ಮಂದಿ ಭಕ್ತರು ಪಾಲ್ಗೊಂಡು ಶ್ರೀ ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Leave a Comment

error: Content is protected !!