39.4 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

ವೇಣೂರು,: ಬೆಳ್ತಂಗಡಿ ತಾಲೂಕಿನ ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆ. 16ರಂದು ಸಿಂಹ ಸಂಕ್ರಮಣ ಹಾಗೂ ಆಟಿ ಕೋಲವು ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ ಕುಮಾರ್ ಅವರ ಉಪಸ್ಥಿತಿಯಲ್ಲಿ ವೇ. ಮೂ. ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರಗಿತು.

ಸಂಕ್ರಮಣ ಪ್ರಯುಕ್ತ ಬೆಳಿಗ್ಗೆ ಶ್ರೀ ದೈವಕ್ಕೆ ಹೂವಿನ ಪೂಜೆ ಸೇವೆ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

ಆಟಿ ತಿಂಗಳ ನಿಮಿತ್ತ ಸಂಜೆ ಕ್ಷೇತ್ರದಲ್ಲಿ ಶ್ರೀ ದೈವಕ್ಕೆ ಆಟಿಕೋಲ ಮತ್ತು ತುಲಾಭಾರ ಸೇವೆ ಜರಗಿತು.

ಶ್ರೀ ಕ್ಷೇತ್ರದ ವಿಕಾಸ್ ಜೈನ್ ಹಾಗೂ ವಿಶ್ವಾಸ್ ಜೈನ್ ಎಲ್ಲರನ್ನು ಬರಮಾಡಿಕೊಂಡರು. ಸಾಂಪ್ರದಾಯಿಕವಾಗಿ ನಡೆದ ಆಟಿ ಕೋಲದಲ್ಲಿ ಮಾಗಣೆ, ಗುತ್ತು ಬರ್ಕೆಯವರು, ಗುರಿಕಾರರು ಹಾಗೂ ನೂರಾರು ಮಂದಿ ಭಕ್ತರು ಪಾಲ್ಗೊಂಡು ಶ್ರೀ ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ