July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

ವೇಣೂರು,: ಬೆಳ್ತಂಗಡಿ ತಾಲೂಕಿನ ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆ. 16ರಂದು ಸಿಂಹ ಸಂಕ್ರಮಣ ಹಾಗೂ ಆಟಿ ಕೋಲವು ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ ಕುಮಾರ್ ಅವರ ಉಪಸ್ಥಿತಿಯಲ್ಲಿ ವೇ. ಮೂ. ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರಗಿತು.

ಸಂಕ್ರಮಣ ಪ್ರಯುಕ್ತ ಬೆಳಿಗ್ಗೆ ಶ್ರೀ ದೈವಕ್ಕೆ ಹೂವಿನ ಪೂಜೆ ಸೇವೆ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

ಆಟಿ ತಿಂಗಳ ನಿಮಿತ್ತ ಸಂಜೆ ಕ್ಷೇತ್ರದಲ್ಲಿ ಶ್ರೀ ದೈವಕ್ಕೆ ಆಟಿಕೋಲ ಮತ್ತು ತುಲಾಭಾರ ಸೇವೆ ಜರಗಿತು.

ಶ್ರೀ ಕ್ಷೇತ್ರದ ವಿಕಾಸ್ ಜೈನ್ ಹಾಗೂ ವಿಶ್ವಾಸ್ ಜೈನ್ ಎಲ್ಲರನ್ನು ಬರಮಾಡಿಕೊಂಡರು. ಸಾಂಪ್ರದಾಯಿಕವಾಗಿ ನಡೆದ ಆಟಿ ಕೋಲದಲ್ಲಿ ಮಾಗಣೆ, ಗುತ್ತು ಬರ್ಕೆಯವರು, ಗುರಿಕಾರರು ಹಾಗೂ ನೂರಾರು ಮಂದಿ ಭಕ್ತರು ಪಾಲ್ಗೊಂಡು ಶ್ರೀ ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Related posts

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!