July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

ಬೆಳ್ತಂಗಡಿ: ಕಳೆದ ನಾಲ್ಕು ದಿವಸದ ಹಿಂದೆ ಕೊಯ್ಯೂರು ಬೆಳಾಲು ರಸ್ತೆಯಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಪ್ರತಿಭಾನ್ವಿತ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.ಬೆಳಾಲು ಗ್ರಾಮದ ನಿವಾಸಿ ಉಮೇಶ್ ಗೌಡ ರವರ ಪುತ್ರ,ಗುರುವಾಯನಕೆರೆ ಖಾಸಾಗಿ‌ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿ ಜೀವ ಎಂದಿನಂತೆ ಮನೆಯಿಂದ ಬೈಕ್ ನಲ್ಲಿ ಗೆಳೆನ ಮನೆಯವರೆಗೆ ಬರುತ್ತಿರುವಾಗ ಮಲೆಬೆಟ್ಟು ನಿನ್ನಿಕಲ್ಲು ಎಂಬಲ್ಲಿ ಬೆಳಿಗ್ಗೆ ಪಿಕಪ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಜೀವ ಅವರಿಗೆ ಗಂಭೀರ ಗಾಯಗೊಂಡಿದ್ದು ಕೂಡಲೇ ಚಿಕಿತ್ಸೆಗೆ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.ಇವರು ತಂದೆ ಉಮೇಶ್ ಗೌಡ,ತಾಯಿ ಕವಿತಾ ಹಾಗೂ ಸಹೋದರ ಮತ್ತು ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

Suddi Udaya

ಆಶುಭಾಷಣ ಸ್ಪರ್ಧೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸುಮೇದ ಕೃಷ್ಣ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

Suddi Udaya
error: Content is protected !!