23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ: ಮುಂಡೂರು ಗ್ರಾಮದ ಬಲ್ಲಿದಡ್ಡ ಮನೆ ನಿವಾಸಿ ಶ್ರೀಮತಿ ಶಿಲ್ಪಾ ರವರು ಸಂಘದ ಹಣವನ್ನು ಮುಂಡೂರಿನ ಕಛೇರಿಗೆ ಕಟ್ಟಿ ಬರುತ್ತೇನೆಂದು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುವ ಘಟನೆ ಆ.14ರಂದು ನಡೆದಿದೆ.

ಪತಿ ಹರೀಶ್ ಬಂಗೇರರವರ ದೂರಿನಂತೆ ಮುಂಡೂರು ಗ್ರಾಮದ ಬಲ್ಲಿದಡ್ಡ ಮನೆ ನಿವಾಸಿ ಶ್ರೀಮತಿ ಶಿಲ್ಪಾ (27 ವರ್ಷ) ಎಂಬವರು ಮಗಳು ವಂಶಿಕಾಳನ್ನು ಶಾಲೆಗೆ ಕರೆದುಕೊಂಡು ಹೋಗಿ ನಂತರ ಧರ್ಮಸ್ಥಳ ಸ್ವಸಹಾಯ ಸಂಘದ ಹಣವನ್ನು ಮುಂಡೂರಿನ ಕಛೇರಿಗೆ ಕಟ್ಟಿ ಬರುತ್ತೇನೆಂದು ಮೊಬೈಲ್ ಅನ್ನು ಮನೆಯಲ್ಲಿ ಬಿಟ್ಟು ಹೋದವರು ಮಗಳನ್ನು ನೆರೆಯ ಮನೆಯಲ್ಲಿ ಶಾಲೆಗೆ ಕರೆದುಕೊಂಡು ಹೋಗಲು ಹೇಳಿ ಹೋದವರು ವಾಪಾಸ್ಸು ಮನೆಗೂ ಬಾರದೇ ಸಂಘದ ಕಛೇರಿಗೂ ಹೋಗದೇ ಕಾಣೆಯಾಗಿರುತ್ತಾರೆ. ಇವರು 2021 ಅಕ್ಟೋಬರ್ ತಿಂಗಳಲ್ಲಿ ಕೂಡಾ ಮನೆಯಂದ ಟೈಲರಿಂಗ್ ಕೆಲಸಕ್ಕೆಂದು ಹೋದವರು ಕಾಣೆಯಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಮಾಡಿ ಕರೆದುಕೊಂಡು ಬರಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya
error: Content is protected !!