July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

ಲಾಯಿಲ: ಮುಹಿಯ್ಯುದ್ಧೀನ್ ಅರಬಿಕ್ ಮದರಸ ಕುಂಟಿನಿ ಇದರ ನೂತನ ಮದರಸ ಕಟ್ಟಡ ಉದ್ಘಾಟನಾ ಸಮಾರಂಭ ಆ. 16ರಂದು ಜುಮಾ ನಮಾಝಿನ ನಂತರ ನಡೆಯಿತು.

ಉದ್ಘಾಟನೆಯನ್ನು ಕಾಜೂರು ತಂಙಳಾದ ಅಸ್ಸಯ್ಯಿದ್ ಝೈನುಲ್ ಆಬಿದೀನ್ ನೆರವೇರಿಸಿ ದುವಾ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಗಾಗಿ ಹಗಲಿರುಳು ಶ್ರಮಿಸಿದ ಅಲ್-ಬುಖಾರಿ ಜುಮಾ ಮಸೀದಿಯ ಅಧ್ಯಕ್ಷರಾದ ಇಸ್ಮಾಯಿಲ್ ಸನಾ ಇವರನ್ನು ಪ್ರೀತಿಪೂರ್ವಕವಾಗಿ ಸನ್ಮಾನಿಸಲಾಯಿತು. ಅದೇ ರೀತಿ ಕಟ್ಟಡ ಕಾಮಗಾರಿಯನ್ನು ಕೇವಲ ಐದು ತಿಂಗಳಲ್ಲಿ ಪೂರ್ತಿಗೊಳಿಸಿಕೊಟ್ಟ ಕಾಂಟ್ರಾಕ್ಟರಾದ ರಿಯಾಝ್ ಪಾದೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾದ ಬಿ.ಎಂ. ಅಬ್ದುಲ್ ಹಮೀದ್ ಹಾಜಿ, ಕಾರ್ಯದರ್ಶಿ ಮಹಮ್ಮದ್ ಕೆ.ಎಸ್.ಆರ್.ಟಿ.ಸಿ., ಖತೀಬರಾದ ಮಹಮ್ಮದ್ ಶರೀಫ್ ಸಖಾಫಿ, ಅಧ್ಯಾಪಕರಾದ ಸೈಫುದ್ಧೀನ್ ಹಾಸಿಮಿ, ಎಲ್ಲಾ ಕರಿಯದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು. ಸದರ್ ಉಸ್ತಾದರಾದ ಉಮರುಲ್ ಫಾರೂಕ್ ಸಅದಿ ಸ್ವಾಗತ ನೆರವೇರಿಸಿ ಧನ್ಯವಾದವಿತ್ತರು.

Related posts

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya
error: Content is protected !!