25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ಧರ್ಮಸ್ಥಳ ಇದರ ಆಶ್ರಯದಲ್ಲಿ, ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮವು ಆ.17 ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮ ಉದ್ಘಾಟಿಸಿ ಸಂದೇಶ ನೀಡಿದರು. ತುಮಕೂರು ಬೆಳ್ಳಾವಿ ಶ್ರೀ ಕಾರದೇಶ್ವರ ಮಠದ ಮಹಾಸ್ವಾಮೀಜಿ ಶ್ರೀ ಕಾರದ ವೀರಬಸವ ರವರು ಆಶೀರ್ವಚನ ನೀಡಿದರು.

ಜಾಗೃತಿ ಅಣ್ಣ/ಮಿತ್ರ ಪ್ರಶಸ್ತಿ ಪ್ರದಾನವನ್ನು ಶಾಸಕ ಹರೀಶ್ ಪೂಂಜ ಹಾಗೂ ಗುರುತಿನ ಚೀಟಿ ವಿತರಣೆಯನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ವಿತರಿಸಿದರು.

ಶ್ರೀ ಕ್ಷೇ.ಧ. ಗ್ರಾ, ಯೋ ಮುಖ್ಯ ಕಾರ್ಯನಿರ್ವಹಣಾರ್ಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಸಂಶೋಧಕರಾದ ಕೆ.ಎಂಸಿ ಮಣಿಪಾಲ ಆಸ್ಪತ್ರೆ ಡಾ| ಅಭಿಷೇಕ್ ಚತುರ್ವೇಧಿ, ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಮೇಖಲಾ ದಿವಾಕರ್ ರವರನ್ನು ಸ್ಮರಣಿಕೆ ನೀಡಿ ಸನ್ಮಾನಿಸಿ, ಆಶಯ ನುಡಿಗಳ್ನಾಡಿದರು.

ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಟ್ರಸ್ಟಿಗಳಾದ ಡಾ| ಪಿ.ವಿ. ಭಂಡಾರಿ, ಡಾ| ಶ್ರೀನಿವಾಸ್ ಭಟ್, ವಿ. ರಾಮಸ್ವಾಮಿ, ಬೆಳ್ತಂಗಡಿ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, , ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ ಉಪಸ್ಥಿತರಿದ್ದರು.

ಈ ವೇಳೆ ಪಾನಮುಕ್ತ ಗ್ರಾಮದ ಸಾಧಕರಾದ ಹೆಗ್ನುರು ಗ್ರಾಮದ ಗ್ರಾ.ಪಂ. ಅಧ್ಯಕ್ಷ ರಮೇಶ್ ರಾಮ ಗೌಡ, ಹುಕ್ಕಳ್ಳಿ ಗ್ರಾಮದ ಊರಿನ ಮುಖಂಡ ವಿನೋದ್ ಗೌಡ, ಕುಳ್ಳೆ ಗ್ರಾಮದ ಜನಜಾಗೃತಿ ಸದಸ್ಯ ಸುಭಾಷ್ ನಾಯ್ಕ್ ರವರನ್ನು ಗೌರವಿಸಲಾಯಿತು.

ಶ್ರೀಮತಿ ಸುಮಂಗಲ ಮತ್ತು ಯೋಜನೆಯ ಕೇಂದ್ರ ಕಛೇರಿಯ ಸಿಬ್ಬಂದಿಗಳು ಪ್ರಾರ್ಥಿಸಿದರು. ಪ್ರಾದೇಶಿಕ ನಿರ್ದೇಶಕರು ವಿವೇಕ್ ವಿ ಪಾಯಸ್ ಸ್ವಾಗತಿಸಿ, ಅಖಿಲ ಕರ್ನಾಟಕ ಜನಜಾಗೃತಿ ಯೋಜನಾಧಿಕಾರಿಗಳಾದ ನಾಗೇಶ್ ವೈ.ಎ., ಭಾಸ್ಕರ್ ಎನ್ ಕಾರ್ಯಕ್ರಮ ನಿರೂಪಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಮೂ. ಕೊರವಿ ಧನ್ಯವಾದವಿತ್ತರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!