24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

ವೇಣೂರು,: ಬೆಳ್ತಂಗಡಿ ತಾಲೂಕಿನ ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆ. 16ರಂದು ಸಿಂಹ ಸಂಕ್ರಮಣ ಹಾಗೂ ಆಟಿ ಕೋಲವು ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ ಕುಮಾರ್ ಅವರ ಉಪಸ್ಥಿತಿಯಲ್ಲಿ ವೇ. ಮೂ. ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರಗಿತು.

ಸಂಕ್ರಮಣ ಪ್ರಯುಕ್ತ ಬೆಳಿಗ್ಗೆ ಶ್ರೀ ದೈವಕ್ಕೆ ಹೂವಿನ ಪೂಜೆ ಸೇವೆ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

ಆಟಿ ತಿಂಗಳ ನಿಮಿತ್ತ ಸಂಜೆ ಕ್ಷೇತ್ರದಲ್ಲಿ ಶ್ರೀ ದೈವಕ್ಕೆ ಆಟಿಕೋಲ ಮತ್ತು ತುಲಾಭಾರ ಸೇವೆ ಜರಗಿತು.

ಶ್ರೀ ಕ್ಷೇತ್ರದ ವಿಕಾಸ್ ಜೈನ್ ಹಾಗೂ ವಿಶ್ವಾಸ್ ಜೈನ್ ಎಲ್ಲರನ್ನು ಬರಮಾಡಿಕೊಂಡರು. ಸಾಂಪ್ರದಾಯಿಕವಾಗಿ ನಡೆದ ಆಟಿ ಕೋಲದಲ್ಲಿ ಮಾಗಣೆ, ಗುತ್ತು ಬರ್ಕೆಯವರು, ಗುರಿಕಾರರು ಹಾಗೂ ನೂರಾರು ಮಂದಿ ಭಕ್ತರು ಪಾಲ್ಗೊಂಡು ಶ್ರೀ ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!