April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

ವೇಣೂರು,: ಬೆಳ್ತಂಗಡಿ ತಾಲೂಕಿನ ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆ. 16ರಂದು ಸಿಂಹ ಸಂಕ್ರಮಣ ಹಾಗೂ ಆಟಿ ಕೋಲವು ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ ಕುಮಾರ್ ಅವರ ಉಪಸ್ಥಿತಿಯಲ್ಲಿ ವೇ. ಮೂ. ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರಗಿತು.

ಸಂಕ್ರಮಣ ಪ್ರಯುಕ್ತ ಬೆಳಿಗ್ಗೆ ಶ್ರೀ ದೈವಕ್ಕೆ ಹೂವಿನ ಪೂಜೆ ಸೇವೆ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

ಆಟಿ ತಿಂಗಳ ನಿಮಿತ್ತ ಸಂಜೆ ಕ್ಷೇತ್ರದಲ್ಲಿ ಶ್ರೀ ದೈವಕ್ಕೆ ಆಟಿಕೋಲ ಮತ್ತು ತುಲಾಭಾರ ಸೇವೆ ಜರಗಿತು.

ಶ್ರೀ ಕ್ಷೇತ್ರದ ವಿಕಾಸ್ ಜೈನ್ ಹಾಗೂ ವಿಶ್ವಾಸ್ ಜೈನ್ ಎಲ್ಲರನ್ನು ಬರಮಾಡಿಕೊಂಡರು. ಸಾಂಪ್ರದಾಯಿಕವಾಗಿ ನಡೆದ ಆಟಿ ಕೋಲದಲ್ಲಿ ಮಾಗಣೆ, ಗುತ್ತು ಬರ್ಕೆಯವರು, ಗುರಿಕಾರರು ಹಾಗೂ ನೂರಾರು ಮಂದಿ ಭಕ್ತರು ಪಾಲ್ಗೊಂಡು ಶ್ರೀ ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya
error: Content is protected !!