September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

ವೇಣೂರು,: ಬೆಳ್ತಂಗಡಿ ತಾಲೂಕಿನ ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆ. 16ರಂದು ಸಿಂಹ ಸಂಕ್ರಮಣ ಹಾಗೂ ಆಟಿ ಕೋಲವು ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ ಕುಮಾರ್ ಅವರ ಉಪಸ್ಥಿತಿಯಲ್ಲಿ ವೇ. ಮೂ. ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರಗಿತು.

ಸಂಕ್ರಮಣ ಪ್ರಯುಕ್ತ ಬೆಳಿಗ್ಗೆ ಶ್ರೀ ದೈವಕ್ಕೆ ಹೂವಿನ ಪೂಜೆ ಸೇವೆ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

ಆಟಿ ತಿಂಗಳ ನಿಮಿತ್ತ ಸಂಜೆ ಕ್ಷೇತ್ರದಲ್ಲಿ ಶ್ರೀ ದೈವಕ್ಕೆ ಆಟಿಕೋಲ ಮತ್ತು ತುಲಾಭಾರ ಸೇವೆ ಜರಗಿತು.

ಶ್ರೀ ಕ್ಷೇತ್ರದ ವಿಕಾಸ್ ಜೈನ್ ಹಾಗೂ ವಿಶ್ವಾಸ್ ಜೈನ್ ಎಲ್ಲರನ್ನು ಬರಮಾಡಿಕೊಂಡರು. ಸಾಂಪ್ರದಾಯಿಕವಾಗಿ ನಡೆದ ಆಟಿ ಕೋಲದಲ್ಲಿ ಮಾಗಣೆ, ಗುತ್ತು ಬರ್ಕೆಯವರು, ಗುರಿಕಾರರು ಹಾಗೂ ನೂರಾರು ಮಂದಿ ಭಕ್ತರು ಪಾಲ್ಗೊಂಡು ಶ್ರೀ ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ ತುಡಿತ ಭಾಗ ಆರು

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya
error: Content is protected !!