ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ : ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿಮಾನಿಗಳಿಂದ ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಸಕ ಹರೀಶ್ ಪೂಂಜಾರವರ ಹುಟ್ಟುಹಬ್ಬವನ್ನು ನಿವಾಸದಲ್ಲಿ ಕೇಕ್ ಕತ್ತರಿಸಿ, ಹೂಗುಚ್ಚ ನೀಡಿ ಶುಭಾಶಯ ಸಲ್ಲಿಸುವ ಮೂಲಕ ಆ 17 ರಂದು ಆಚರಿಸಲಾಯಿತು .

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಕಾರ್ಯದರ್ಶಿ ಮಹೇಶ್ ಜೇoಕ್ಯಾರ್, ಮಂಡಲ ಕಾರ್ಯಾಲಯ ಕಾರ್ಯದರ್ಶಿ ಜಯಾನಂದ ಕಲ್ಲಾಪು, ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು,ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾoಜಾಳ, ಮೊಗ್ರು ಶಕ್ತಿ ಕೇಂದ್ರ ಪ್ರಮುಖ್ ಗಂಗಾಧರ ಪೂಜಾರಿ, ಬೈಪಾಡಿ ಬೂತ್ ಅಧ್ಯಕ್ಷರಾದ ಡೀಕಯ್ಯ ಗೌಡ, ಮೊಗ್ರು ಬೂತ್ ಅಧ್ಯಕ್ಷರಾದ ಶಿವಪ್ರಸಾದ್ ಗೌಡ ಸುದೆಪ್ಪಿಲ,ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಅಲೆಕ್ಕಿ,ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾವತಿ, ಸದಸ್ಯರಾದ ಚೇತನ್ ಪಾಲ್ತಿಮಾರು, ಪರಮೇಶ್ವರಿ ಕೆ ಗೌಡ ಪುಯಿಲ, ಸುಚಿತ್ರಾ ಮೂರ್ತಾಜೆ, ಅನಿತಾ ಕುರುಡಂಗೆ, ಭಾರತಿ ಕೊಡಿಯೇಲು, ವಿಮಲ ತಾರಿದಡಿ, ಪವಿತ್ರ ಮುರ,ಬೂತ್ ಕಾರ್ಯದರ್ಶಿ ಲೋಹಿತ್ ಸೋಣಕುಮೇರು, ಪ್ರಮುಖರಾದ ದಿನೇಶ್ ಗೌಡ ಅಡ್ಡಾರು ಉಪಸ್ಥಿತರಿದ್ದರು.

Leave a Comment

error: Content is protected !!