23.6 C
ಪುತ್ತೂರು, ಬೆಳ್ತಂಗಡಿ
May 19, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

ಬೆಳ್ತಂಗಡಿ: ಕಳೆದ ನಾಲ್ಕು ದಿವಸದ ಹಿಂದೆ ಕೊಯ್ಯೂರು ಬೆಳಾಲು ರಸ್ತೆಯಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಪ್ರತಿಭಾನ್ವಿತ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.ಬೆಳಾಲು ಗ್ರಾಮದ ನಿವಾಸಿ ಉಮೇಶ್ ಗೌಡ ರವರ ಪುತ್ರ,ಗುರುವಾಯನಕೆರೆ ಖಾಸಾಗಿ‌ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿ ಜೀವ ಎಂದಿನಂತೆ ಮನೆಯಿಂದ ಬೈಕ್ ನಲ್ಲಿ ಗೆಳೆನ ಮನೆಯವರೆಗೆ ಬರುತ್ತಿರುವಾಗ ಮಲೆಬೆಟ್ಟು ನಿನ್ನಿಕಲ್ಲು ಎಂಬಲ್ಲಿ ಬೆಳಿಗ್ಗೆ ಪಿಕಪ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಜೀವ ಅವರಿಗೆ ಗಂಭೀರ ಗಾಯಗೊಂಡಿದ್ದು ಕೂಡಲೇ ಚಿಕಿತ್ಸೆಗೆ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.ಇವರು ತಂದೆ ಉಮೇಶ್ ಗೌಡ,ತಾಯಿ ಕವಿತಾ ಹಾಗೂ ಸಹೋದರ ಮತ್ತು ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya
error: Content is protected !!