24.4 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

ಉಜಿರೆ :ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇವರ ಸಹಕಾರದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆಯು ಎಸ್ ಪಿ ಆಯಿಲು ಮಿಲ್ ಸಭಾಂಗಣದಲ್ಲಿ ಆ16 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆಯ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ ವಹಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಶ್ರೀಮತಿ ಸುಲೋಚನಾ ಸಂಜೀವ ಗೌಡ ಪಾಂಚಜನ್ಯ ವರಮಹಾಲಕ್ಷ್ಮೀ ವ್ರತದ ಮಹತ್ವವನ್ನು ತಿಳಿಸಿದರು.

ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ,ದಾಮೋದರ ಗೌಡ ಸುರುಳಿ ನಿರ್ದೇಶಕರು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಉಜಿರೆ, ಜೊತೆ ಕಾರ್ಯದರ್ಶಿ, ಒಕ್ಕಲಿಗ ಗೌಡರ ಸೇವಾ ಸಂಘ ದ. ಕ,ಸೌಮ್ಯಲತ ಜಯಂತ ಗೌಡ,ದ.ಕ ಒಕ್ಕಲಿಗ ಸೇವಾ ಸಂಘದ ಸದಸ್ಯ ವಿಜಯ್ ಗೌಡ ವೇಣೂರು,ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮoಜ,ಜೊತೆ ಕಾರ್ಯದರ್ಶಿ ಸೂರಜ್ ವಳಂಬ್ರ, ಸದಸ್ಯರು ಒಕ್ಕಲಿಗರ ಸೇವಾ ಸಂಘ ದ.ಕ ಜಿಲ್ಲೆ ಉಪಸ್ಥಿತರಿದ್ದರು.

ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೇರಿಮಾರು ಬಾಲಕೃಷ್ಣ ಗೌಡರು ಪ್ರಸ್ತಾವಿಕ ಮಾತನಾಡಿದರು.
ಶ್ರೀಮತಿ ಯಶೋದಾ ರಾಘವೇಂದ್ರ ಗೌಡ ಸ್ವಾಗತಿಸಿ,ಅನುಪಮಾ ಸತೀಶ್ ಗೌಡ ಧನ್ಯವಾದವಿತ್ತರು. ಪ್ರಕಾಶ್ ಗೌಡ ಕೆದ್ಲ ನಿರೂಪಿಸಿದರು.

Related posts

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya
error: Content is protected !!