23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ: ಮುಂಡೂರು ಗ್ರಾಮದ ಬಲ್ಲಿದಡ್ಡ ಮನೆ ನಿವಾಸಿ ಶ್ರೀಮತಿ ಶಿಲ್ಪಾ ರವರು ಸಂಘದ ಹಣವನ್ನು ಮುಂಡೂರಿನ ಕಛೇರಿಗೆ ಕಟ್ಟಿ ಬರುತ್ತೇನೆಂದು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುವ ಘಟನೆ ಆ.14ರಂದು ನಡೆದಿದೆ.

ಪತಿ ಹರೀಶ್ ಬಂಗೇರರವರ ದೂರಿನಂತೆ ಮುಂಡೂರು ಗ್ರಾಮದ ಬಲ್ಲಿದಡ್ಡ ಮನೆ ನಿವಾಸಿ ಶ್ರೀಮತಿ ಶಿಲ್ಪಾ (27 ವರ್ಷ) ಎಂಬವರು ಮಗಳು ವಂಶಿಕಾಳನ್ನು ಶಾಲೆಗೆ ಕರೆದುಕೊಂಡು ಹೋಗಿ ನಂತರ ಧರ್ಮಸ್ಥಳ ಸ್ವಸಹಾಯ ಸಂಘದ ಹಣವನ್ನು ಮುಂಡೂರಿನ ಕಛೇರಿಗೆ ಕಟ್ಟಿ ಬರುತ್ತೇನೆಂದು ಮೊಬೈಲ್ ಅನ್ನು ಮನೆಯಲ್ಲಿ ಬಿಟ್ಟು ಹೋದವರು ಮಗಳನ್ನು ನೆರೆಯ ಮನೆಯಲ್ಲಿ ಶಾಲೆಗೆ ಕರೆದುಕೊಂಡು ಹೋಗಲು ಹೇಳಿ ಹೋದವರು ವಾಪಾಸ್ಸು ಮನೆಗೂ ಬಾರದೇ ಸಂಘದ ಕಛೇರಿಗೂ ಹೋಗದೇ ಕಾಣೆಯಾಗಿರುತ್ತಾರೆ. ಇವರು 2021 ಅಕ್ಟೋಬರ್ ತಿಂಗಳಲ್ಲಿ ಕೂಡಾ ಮನೆಯಂದ ಟೈಲರಿಂಗ್ ಕೆಲಸಕ್ಕೆಂದು ಹೋದವರು ಕಾಣೆಯಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಮಾಡಿ ಕರೆದುಕೊಂಡು ಬರಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya
error: Content is protected !!