24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ: ಮುಂಡೂರು ಗ್ರಾಮದ ಬಲ್ಲಿದಡ್ಡ ಮನೆ ನಿವಾಸಿ ಶ್ರೀಮತಿ ಶಿಲ್ಪಾ ರವರು ಸಂಘದ ಹಣವನ್ನು ಮುಂಡೂರಿನ ಕಛೇರಿಗೆ ಕಟ್ಟಿ ಬರುತ್ತೇನೆಂದು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುವ ಘಟನೆ ಆ.14ರಂದು ನಡೆದಿದೆ.

ಪತಿ ಹರೀಶ್ ಬಂಗೇರರವರ ದೂರಿನಂತೆ ಮುಂಡೂರು ಗ್ರಾಮದ ಬಲ್ಲಿದಡ್ಡ ಮನೆ ನಿವಾಸಿ ಶ್ರೀಮತಿ ಶಿಲ್ಪಾ (27 ವರ್ಷ) ಎಂಬವರು ಮಗಳು ವಂಶಿಕಾಳನ್ನು ಶಾಲೆಗೆ ಕರೆದುಕೊಂಡು ಹೋಗಿ ನಂತರ ಧರ್ಮಸ್ಥಳ ಸ್ವಸಹಾಯ ಸಂಘದ ಹಣವನ್ನು ಮುಂಡೂರಿನ ಕಛೇರಿಗೆ ಕಟ್ಟಿ ಬರುತ್ತೇನೆಂದು ಮೊಬೈಲ್ ಅನ್ನು ಮನೆಯಲ್ಲಿ ಬಿಟ್ಟು ಹೋದವರು ಮಗಳನ್ನು ನೆರೆಯ ಮನೆಯಲ್ಲಿ ಶಾಲೆಗೆ ಕರೆದುಕೊಂಡು ಹೋಗಲು ಹೇಳಿ ಹೋದವರು ವಾಪಾಸ್ಸು ಮನೆಗೂ ಬಾರದೇ ಸಂಘದ ಕಛೇರಿಗೂ ಹೋಗದೇ ಕಾಣೆಯಾಗಿರುತ್ತಾರೆ. ಇವರು 2021 ಅಕ್ಟೋಬರ್ ತಿಂಗಳಲ್ಲಿ ಕೂಡಾ ಮನೆಯಂದ ಟೈಲರಿಂಗ್ ಕೆಲಸಕ್ಕೆಂದು ಹೋದವರು ಕಾಣೆಯಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಮಾಡಿ ಕರೆದುಕೊಂಡು ಬರಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!