22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ: ಮುಂಡೂರು ಗ್ರಾಮದ ಬಲ್ಲಿದಡ್ಡ ಮನೆ ನಿವಾಸಿ ಶ್ರೀಮತಿ ಶಿಲ್ಪಾ ರವರು ಸಂಘದ ಹಣವನ್ನು ಮುಂಡೂರಿನ ಕಛೇರಿಗೆ ಕಟ್ಟಿ ಬರುತ್ತೇನೆಂದು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುವ ಘಟನೆ ಆ.14ರಂದು ನಡೆದಿದೆ.

ಪತಿ ಹರೀಶ್ ಬಂಗೇರರವರ ದೂರಿನಂತೆ ಮುಂಡೂರು ಗ್ರಾಮದ ಬಲ್ಲಿದಡ್ಡ ಮನೆ ನಿವಾಸಿ ಶ್ರೀಮತಿ ಶಿಲ್ಪಾ (27 ವರ್ಷ) ಎಂಬವರು ಮಗಳು ವಂಶಿಕಾಳನ್ನು ಶಾಲೆಗೆ ಕರೆದುಕೊಂಡು ಹೋಗಿ ನಂತರ ಧರ್ಮಸ್ಥಳ ಸ್ವಸಹಾಯ ಸಂಘದ ಹಣವನ್ನು ಮುಂಡೂರಿನ ಕಛೇರಿಗೆ ಕಟ್ಟಿ ಬರುತ್ತೇನೆಂದು ಮೊಬೈಲ್ ಅನ್ನು ಮನೆಯಲ್ಲಿ ಬಿಟ್ಟು ಹೋದವರು ಮಗಳನ್ನು ನೆರೆಯ ಮನೆಯಲ್ಲಿ ಶಾಲೆಗೆ ಕರೆದುಕೊಂಡು ಹೋಗಲು ಹೇಳಿ ಹೋದವರು ವಾಪಾಸ್ಸು ಮನೆಗೂ ಬಾರದೇ ಸಂಘದ ಕಛೇರಿಗೂ ಹೋಗದೇ ಕಾಣೆಯಾಗಿರುತ್ತಾರೆ. ಇವರು 2021 ಅಕ್ಟೋಬರ್ ತಿಂಗಳಲ್ಲಿ ಕೂಡಾ ಮನೆಯಂದ ಟೈಲರಿಂಗ್ ಕೆಲಸಕ್ಕೆಂದು ಹೋದವರು ಕಾಣೆಯಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಮಾಡಿ ಕರೆದುಕೊಂಡು ಬರಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!