25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

ಲಾಯಿಲ: ಮುಹಿಯ್ಯುದ್ಧೀನ್ ಅರಬಿಕ್ ಮದರಸ ಕುಂಟಿನಿ ಇದರ ನೂತನ ಮದರಸ ಕಟ್ಟಡ ಉದ್ಘಾಟನಾ ಸಮಾರಂಭ ಆ. 16ರಂದು ಜುಮಾ ನಮಾಝಿನ ನಂತರ ನಡೆಯಿತು.

ಉದ್ಘಾಟನೆಯನ್ನು ಕಾಜೂರು ತಂಙಳಾದ ಅಸ್ಸಯ್ಯಿದ್ ಝೈನುಲ್ ಆಬಿದೀನ್ ನೆರವೇರಿಸಿ ದುವಾ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಗಾಗಿ ಹಗಲಿರುಳು ಶ್ರಮಿಸಿದ ಅಲ್-ಬುಖಾರಿ ಜುಮಾ ಮಸೀದಿಯ ಅಧ್ಯಕ್ಷರಾದ ಇಸ್ಮಾಯಿಲ್ ಸನಾ ಇವರನ್ನು ಪ್ರೀತಿಪೂರ್ವಕವಾಗಿ ಸನ್ಮಾನಿಸಲಾಯಿತು. ಅದೇ ರೀತಿ ಕಟ್ಟಡ ಕಾಮಗಾರಿಯನ್ನು ಕೇವಲ ಐದು ತಿಂಗಳಲ್ಲಿ ಪೂರ್ತಿಗೊಳಿಸಿಕೊಟ್ಟ ಕಾಂಟ್ರಾಕ್ಟರಾದ ರಿಯಾಝ್ ಪಾದೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾದ ಬಿ.ಎಂ. ಅಬ್ದುಲ್ ಹಮೀದ್ ಹಾಜಿ, ಕಾರ್ಯದರ್ಶಿ ಮಹಮ್ಮದ್ ಕೆ.ಎಸ್.ಆರ್.ಟಿ.ಸಿ., ಖತೀಬರಾದ ಮಹಮ್ಮದ್ ಶರೀಫ್ ಸಖಾಫಿ, ಅಧ್ಯಾಪಕರಾದ ಸೈಫುದ್ಧೀನ್ ಹಾಸಿಮಿ, ಎಲ್ಲಾ ಕರಿಯದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು. ಸದರ್ ಉಸ್ತಾದರಾದ ಉಮರುಲ್ ಫಾರೂಕ್ ಸಅದಿ ಸ್ವಾಗತ ನೆರವೇರಿಸಿ ಧನ್ಯವಾದವಿತ್ತರು.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!