April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

ಲಾಯಿಲ: ಮುಹಿಯ್ಯುದ್ಧೀನ್ ಅರಬಿಕ್ ಮದರಸ ಕುಂಟಿನಿ ಇದರ ನೂತನ ಮದರಸ ಕಟ್ಟಡ ಉದ್ಘಾಟನಾ ಸಮಾರಂಭ ಆ. 16ರಂದು ಜುಮಾ ನಮಾಝಿನ ನಂತರ ನಡೆಯಿತು.

ಉದ್ಘಾಟನೆಯನ್ನು ಕಾಜೂರು ತಂಙಳಾದ ಅಸ್ಸಯ್ಯಿದ್ ಝೈನುಲ್ ಆಬಿದೀನ್ ನೆರವೇರಿಸಿ ದುವಾ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಗಾಗಿ ಹಗಲಿರುಳು ಶ್ರಮಿಸಿದ ಅಲ್-ಬುಖಾರಿ ಜುಮಾ ಮಸೀದಿಯ ಅಧ್ಯಕ್ಷರಾದ ಇಸ್ಮಾಯಿಲ್ ಸನಾ ಇವರನ್ನು ಪ್ರೀತಿಪೂರ್ವಕವಾಗಿ ಸನ್ಮಾನಿಸಲಾಯಿತು. ಅದೇ ರೀತಿ ಕಟ್ಟಡ ಕಾಮಗಾರಿಯನ್ನು ಕೇವಲ ಐದು ತಿಂಗಳಲ್ಲಿ ಪೂರ್ತಿಗೊಳಿಸಿಕೊಟ್ಟ ಕಾಂಟ್ರಾಕ್ಟರಾದ ರಿಯಾಝ್ ಪಾದೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾದ ಬಿ.ಎಂ. ಅಬ್ದುಲ್ ಹಮೀದ್ ಹಾಜಿ, ಕಾರ್ಯದರ್ಶಿ ಮಹಮ್ಮದ್ ಕೆ.ಎಸ್.ಆರ್.ಟಿ.ಸಿ., ಖತೀಬರಾದ ಮಹಮ್ಮದ್ ಶರೀಫ್ ಸಖಾಫಿ, ಅಧ್ಯಾಪಕರಾದ ಸೈಫುದ್ಧೀನ್ ಹಾಸಿಮಿ, ಎಲ್ಲಾ ಕರಿಯದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು. ಸದರ್ ಉಸ್ತಾದರಾದ ಉಮರುಲ್ ಫಾರೂಕ್ ಸಅದಿ ಸ್ವಾಗತ ನೆರವೇರಿಸಿ ಧನ್ಯವಾದವಿತ್ತರು.

Related posts

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya
error: Content is protected !!