23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

ಲಾಯಿಲ: ಮುಹಿಯ್ಯುದ್ಧೀನ್ ಅರಬಿಕ್ ಮದರಸ ಕುಂಟಿನಿ ಇದರ ನೂತನ ಮದರಸ ಕಟ್ಟಡ ಉದ್ಘಾಟನಾ ಸಮಾರಂಭ ಆ. 16ರಂದು ಜುಮಾ ನಮಾಝಿನ ನಂತರ ನಡೆಯಿತು.

ಉದ್ಘಾಟನೆಯನ್ನು ಕಾಜೂರು ತಂಙಳಾದ ಅಸ್ಸಯ್ಯಿದ್ ಝೈನುಲ್ ಆಬಿದೀನ್ ನೆರವೇರಿಸಿ ದುವಾ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಗಾಗಿ ಹಗಲಿರುಳು ಶ್ರಮಿಸಿದ ಅಲ್-ಬುಖಾರಿ ಜುಮಾ ಮಸೀದಿಯ ಅಧ್ಯಕ್ಷರಾದ ಇಸ್ಮಾಯಿಲ್ ಸನಾ ಇವರನ್ನು ಪ್ರೀತಿಪೂರ್ವಕವಾಗಿ ಸನ್ಮಾನಿಸಲಾಯಿತು. ಅದೇ ರೀತಿ ಕಟ್ಟಡ ಕಾಮಗಾರಿಯನ್ನು ಕೇವಲ ಐದು ತಿಂಗಳಲ್ಲಿ ಪೂರ್ತಿಗೊಳಿಸಿಕೊಟ್ಟ ಕಾಂಟ್ರಾಕ್ಟರಾದ ರಿಯಾಝ್ ಪಾದೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾದ ಬಿ.ಎಂ. ಅಬ್ದುಲ್ ಹಮೀದ್ ಹಾಜಿ, ಕಾರ್ಯದರ್ಶಿ ಮಹಮ್ಮದ್ ಕೆ.ಎಸ್.ಆರ್.ಟಿ.ಸಿ., ಖತೀಬರಾದ ಮಹಮ್ಮದ್ ಶರೀಫ್ ಸಖಾಫಿ, ಅಧ್ಯಾಪಕರಾದ ಸೈಫುದ್ಧೀನ್ ಹಾಸಿಮಿ, ಎಲ್ಲಾ ಕರಿಯದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು. ಸದರ್ ಉಸ್ತಾದರಾದ ಉಮರುಲ್ ಫಾರೂಕ್ ಸಅದಿ ಸ್ವಾಗತ ನೆರವೇರಿಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಜಾರಿಗೆಬೈಲಿನಲ್ಲಿ ದ್ವಿಚಕ್ರ ವಾಹನ ಅಪಘಾತ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!