ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

ಲಾಯಿಲ: ಮುಹಿಯ್ಯುದ್ಧೀನ್ ಅರಬಿಕ್ ಮದರಸ ಕುಂಟಿನಿ ಇದರ ನೂತನ ಮದರಸ ಕಟ್ಟಡ ಉದ್ಘಾಟನಾ ಸಮಾರಂಭ ಆ. 16ರಂದು ಜುಮಾ ನಮಾಝಿನ ನಂತರ ನಡೆಯಿತು.

ಉದ್ಘಾಟನೆಯನ್ನು ಕಾಜೂರು ತಂಙಳಾದ ಅಸ್ಸಯ್ಯಿದ್ ಝೈನುಲ್ ಆಬಿದೀನ್ ನೆರವೇರಿಸಿ ದುವಾ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಗಾಗಿ ಹಗಲಿರುಳು ಶ್ರಮಿಸಿದ ಅಲ್-ಬುಖಾರಿ ಜುಮಾ ಮಸೀದಿಯ ಅಧ್ಯಕ್ಷರಾದ ಇಸ್ಮಾಯಿಲ್ ಸನಾ ಇವರನ್ನು ಪ್ರೀತಿಪೂರ್ವಕವಾಗಿ ಸನ್ಮಾನಿಸಲಾಯಿತು. ಅದೇ ರೀತಿ ಕಟ್ಟಡ ಕಾಮಗಾರಿಯನ್ನು ಕೇವಲ ಐದು ತಿಂಗಳಲ್ಲಿ ಪೂರ್ತಿಗೊಳಿಸಿಕೊಟ್ಟ ಕಾಂಟ್ರಾಕ್ಟರಾದ ರಿಯಾಝ್ ಪಾದೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾದ ಬಿ.ಎಂ. ಅಬ್ದುಲ್ ಹಮೀದ್ ಹಾಜಿ, ಕಾರ್ಯದರ್ಶಿ ಮಹಮ್ಮದ್ ಕೆ.ಎಸ್.ಆರ್.ಟಿ.ಸಿ., ಖತೀಬರಾದ ಮಹಮ್ಮದ್ ಶರೀಫ್ ಸಖಾಫಿ, ಅಧ್ಯಾಪಕರಾದ ಸೈಫುದ್ಧೀನ್ ಹಾಸಿಮಿ, ಎಲ್ಲಾ ಕರಿಯದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು. ಸದರ್ ಉಸ್ತಾದರಾದ ಉಮರುಲ್ ಫಾರೂಕ್ ಸಅದಿ ಸ್ವಾಗತ ನೆರವೇರಿಸಿ ಧನ್ಯವಾದವಿತ್ತರು.

Related posts

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿಗಳ ಸಾಧನೆ

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya
error: Content is protected !!