23.3 C
ಪುತ್ತೂರು, ಬೆಳ್ತಂಗಡಿ
May 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಉಜಿರೆ: ಪ್ರತಿಯೊಂದು ಪ್ರದೇಶಕ್ಕೂ ತನ್ನದೇ ಆದ ಸಂಸ್ಕೃತಿ ಹಾಗೂ ಸಂಪ್ರದಾಯಗಳು ಇವೆ. ಇವತ್ತು ನಾವು ನಮ್ಮ ಮೂಲ ಸಂಸ್ಕೃತಿಯನ್ನು ಮರೆತು ಅನ್ಯ ಸಂಸ್ಕೃತಿಗೆ ಮಾರುಹೋಗುತ್ತಿದ್ದೇವೆ . ಕುಂದಾಪುರ ಭಾಗದ ನೆಲದ ಸಂಸ್ಕೃತಿ , ಭಾಷೆ , ಉತ್ಸವಗಳು ವಿಶಿಷ್ಟವಾಗಿ ನಿಲ್ಲುತ್ತವೆ. ಕುಂದಾಪ್ರ ಭಾಷೆಯ ಸೊಗಡು ಅನನ್ಯವಾದುದು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸಂಹಿಕ ಭಾಷಾ ವೇದಿಕೆಯ ವತಿಯಿಂದ ನಡೆದ ಕುಂದಾಪ್ರ ಕನ್ನಡ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು. ಕುಂದಾಪ್ರ ಭಾಷೆ , ಸಂಸ್ಕೃತಿ , ಆಚಾರ ವಿಚಾರಗಳ ಬಗ್ಗೆ ರಾಜ್ಯಪ್ರಶಸ್ತಿ ಪುರಸ್ಕೃತ ಬಿ.ಸೋಮಶೇಖರ ಶೆಟ್ಟಿ , ಎಸ್ ಡಿ ಎಂ ಪದವಿ ಕಾಲೇಜಿನ ಉಪನ್ಯಾಸಕರಾದ ಹರೀಶ್ ಶೆಟ್ಟಿ , ಅಭಿಜ್ಞಾ ಉಪಾಧ್ಯಾಯ , ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಅಧಿಕಾರಿ ಪ್ರದೀಪಕುಮಾರ್ಶೆಟ್ಟಿಯವರು ಮಾತನಾಡಿದರು.

ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಉಪಸ್ಥಿತರಿದ್ದರು. ಅಶ್ಮಿತಾ ಸ್ವಾಗತಿಸಿ , ಪ್ರಥ್ವಿ ಹೆಗಡೆ ವಂದಿಸಿದರು. ರಾ. ಸೇ. ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಉಪನ್ಯಾಸಕಿ ಅಮೃತಾ ಶೆಟ್ಟಿ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕುಂದಾಪ್ರ ಕನ್ನಡ ಭಿತ್ತಿಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು ಹಾಗೂ ಅಂಕಿತಾ ಬಳಗ , ಅಪರ್ಣಾ ಬಳಗ ಹಾಗೂ ಸುಭಾಷ್ ಶೆಟ್ಟಿ ಬಳಗದವರಿಂದ ಕುಂದಾಪ್ರ ಕನ್ನಡದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya
error: Content is protected !!