ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

ಉಜಿರೆ :ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇವರ ಸಹಕಾರದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆಯು ಎಸ್ ಪಿ ಆಯಿಲು ಮಿಲ್ ಸಭಾಂಗಣದಲ್ಲಿ ಆ16 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆಯ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ ವಹಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಶ್ರೀಮತಿ ಸುಲೋಚನಾ ಸಂಜೀವ ಗೌಡ ಪಾಂಚಜನ್ಯ ವರಮಹಾಲಕ್ಷ್ಮೀ ವ್ರತದ ಮಹತ್ವವನ್ನು ತಿಳಿಸಿದರು.

ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ,ದಾಮೋದರ ಗೌಡ ಸುರುಳಿ ನಿರ್ದೇಶಕರು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಉಜಿರೆ, ಜೊತೆ ಕಾರ್ಯದರ್ಶಿ, ಒಕ್ಕಲಿಗ ಗೌಡರ ಸೇವಾ ಸಂಘ ದ. ಕ,ಸೌಮ್ಯಲತ ಜಯಂತ ಗೌಡ,ದ.ಕ ಒಕ್ಕಲಿಗ ಸೇವಾ ಸಂಘದ ಸದಸ್ಯ ವಿಜಯ್ ಗೌಡ ವೇಣೂರು,ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮoಜ,ಜೊತೆ ಕಾರ್ಯದರ್ಶಿ ಸೂರಜ್ ವಳಂಬ್ರ, ಸದಸ್ಯರು ಒಕ್ಕಲಿಗರ ಸೇವಾ ಸಂಘ ದ.ಕ ಜಿಲ್ಲೆ ಉಪಸ್ಥಿತರಿದ್ದರು.

ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೇರಿಮಾರು ಬಾಲಕೃಷ್ಣ ಗೌಡರು ಪ್ರಸ್ತಾವಿಕ ಮಾತನಾಡಿದರು.
ಶ್ರೀಮತಿ ಯಶೋದಾ ರಾಘವೇಂದ್ರ ಗೌಡ ಸ್ವಾಗತಿಸಿ,ಅನುಪಮಾ ಸತೀಶ್ ಗೌಡ ಧನ್ಯವಾದವಿತ್ತರು. ಪ್ರಕಾಶ್ ಗೌಡ ಕೆದ್ಲ ನಿರೂಪಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2026

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya
error: Content is protected !!