24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

ಲಾಯಿಲ: ಮುಹಿಯ್ಯುದ್ಧೀನ್ ಅರಬಿಕ್ ಮದರಸ ಕುಂಟಿನಿ ಇದರ ನೂತನ ಮದರಸ ಕಟ್ಟಡ ಉದ್ಘಾಟನಾ ಸಮಾರಂಭ ಆ. 16ರಂದು ಜುಮಾ ನಮಾಝಿನ ನಂತರ ನಡೆಯಿತು.

ಉದ್ಘಾಟನೆಯನ್ನು ಕಾಜೂರು ತಂಙಳಾದ ಅಸ್ಸಯ್ಯಿದ್ ಝೈನುಲ್ ಆಬಿದೀನ್ ನೆರವೇರಿಸಿ ದುವಾ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಗಾಗಿ ಹಗಲಿರುಳು ಶ್ರಮಿಸಿದ ಅಲ್-ಬುಖಾರಿ ಜುಮಾ ಮಸೀದಿಯ ಅಧ್ಯಕ್ಷರಾದ ಇಸ್ಮಾಯಿಲ್ ಸನಾ ಇವರನ್ನು ಪ್ರೀತಿಪೂರ್ವಕವಾಗಿ ಸನ್ಮಾನಿಸಲಾಯಿತು. ಅದೇ ರೀತಿ ಕಟ್ಟಡ ಕಾಮಗಾರಿಯನ್ನು ಕೇವಲ ಐದು ತಿಂಗಳಲ್ಲಿ ಪೂರ್ತಿಗೊಳಿಸಿಕೊಟ್ಟ ಕಾಂಟ್ರಾಕ್ಟರಾದ ರಿಯಾಝ್ ಪಾದೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾದ ಬಿ.ಎಂ. ಅಬ್ದುಲ್ ಹಮೀದ್ ಹಾಜಿ, ಕಾರ್ಯದರ್ಶಿ ಮಹಮ್ಮದ್ ಕೆ.ಎಸ್.ಆರ್.ಟಿ.ಸಿ., ಖತೀಬರಾದ ಮಹಮ್ಮದ್ ಶರೀಫ್ ಸಖಾಫಿ, ಅಧ್ಯಾಪಕರಾದ ಸೈಫುದ್ಧೀನ್ ಹಾಸಿಮಿ, ಎಲ್ಲಾ ಕರಿಯದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು. ಸದರ್ ಉಸ್ತಾದರಾದ ಉಮರುಲ್ ಫಾರೂಕ್ ಸಅದಿ ಸ್ವಾಗತ ನೆರವೇರಿಸಿ ಧನ್ಯವಾದವಿತ್ತರು.

Related posts

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya
error: Content is protected !!