July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

ಲಾಯಿಲ: ಮುಹಿಯ್ಯುದ್ಧೀನ್ ಅರಬಿಕ್ ಮದರಸ ಕುಂಟಿನಿ ಇದರ ನೂತನ ಮದರಸ ಕಟ್ಟಡ ಉದ್ಘಾಟನಾ ಸಮಾರಂಭ ಆ. 16ರಂದು ಜುಮಾ ನಮಾಝಿನ ನಂತರ ನಡೆಯಿತು.

ಉದ್ಘಾಟನೆಯನ್ನು ಕಾಜೂರು ತಂಙಳಾದ ಅಸ್ಸಯ್ಯಿದ್ ಝೈನುಲ್ ಆಬಿದೀನ್ ನೆರವೇರಿಸಿ ದುವಾ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಗಾಗಿ ಹಗಲಿರುಳು ಶ್ರಮಿಸಿದ ಅಲ್-ಬುಖಾರಿ ಜುಮಾ ಮಸೀದಿಯ ಅಧ್ಯಕ್ಷರಾದ ಇಸ್ಮಾಯಿಲ್ ಸನಾ ಇವರನ್ನು ಪ್ರೀತಿಪೂರ್ವಕವಾಗಿ ಸನ್ಮಾನಿಸಲಾಯಿತು. ಅದೇ ರೀತಿ ಕಟ್ಟಡ ಕಾಮಗಾರಿಯನ್ನು ಕೇವಲ ಐದು ತಿಂಗಳಲ್ಲಿ ಪೂರ್ತಿಗೊಳಿಸಿಕೊಟ್ಟ ಕಾಂಟ್ರಾಕ್ಟರಾದ ರಿಯಾಝ್ ಪಾದೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾದ ಬಿ.ಎಂ. ಅಬ್ದುಲ್ ಹಮೀದ್ ಹಾಜಿ, ಕಾರ್ಯದರ್ಶಿ ಮಹಮ್ಮದ್ ಕೆ.ಎಸ್.ಆರ್.ಟಿ.ಸಿ., ಖತೀಬರಾದ ಮಹಮ್ಮದ್ ಶರೀಫ್ ಸಖಾಫಿ, ಅಧ್ಯಾಪಕರಾದ ಸೈಫುದ್ಧೀನ್ ಹಾಸಿಮಿ, ಎಲ್ಲಾ ಕರಿಯದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು. ಸದರ್ ಉಸ್ತಾದರಾದ ಉಮರುಲ್ ಫಾರೂಕ್ ಸಅದಿ ಸ್ವಾಗತ ನೆರವೇರಿಸಿ ಧನ್ಯವಾದವಿತ್ತರು.

Related posts

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಮಹಾಸಭೆ: ಆಡಳಿತ ಮಂಡಳಿಗೆ ಮತದಾನ; 11 ಮಂದಿ ನಿರ್ದೇಶಕರ ಆಯ್ಕೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಭಾರಿ ಮಳೆ: ಆ.30ರಂದು ದ.ಕ.ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya
error: Content is protected !!