ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

ಲಾಯಿಲ: ಮುಹಿಯ್ಯುದ್ಧೀನ್ ಅರಬಿಕ್ ಮದರಸ ಕುಂಟಿನಿ ಇದರ ನೂತನ ಮದರಸ ಕಟ್ಟಡ ಉದ್ಘಾಟನಾ ಸಮಾರಂಭ ಆ. 16ರಂದು ಜುಮಾ ನಮಾಝಿನ ನಂತರ ನಡೆಯಿತು.

ಉದ್ಘಾಟನೆಯನ್ನು ಕಾಜೂರು ತಂಙಳಾದ ಅಸ್ಸಯ್ಯಿದ್ ಝೈನುಲ್ ಆಬಿದೀನ್ ನೆರವೇರಿಸಿ ದುವಾ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಗಾಗಿ ಹಗಲಿರುಳು ಶ್ರಮಿಸಿದ ಅಲ್-ಬುಖಾರಿ ಜುಮಾ ಮಸೀದಿಯ ಅಧ್ಯಕ್ಷರಾದ ಇಸ್ಮಾಯಿಲ್ ಸನಾ ಇವರನ್ನು ಪ್ರೀತಿಪೂರ್ವಕವಾಗಿ ಸನ್ಮಾನಿಸಲಾಯಿತು. ಅದೇ ರೀತಿ ಕಟ್ಟಡ ಕಾಮಗಾರಿಯನ್ನು ಕೇವಲ ಐದು ತಿಂಗಳಲ್ಲಿ ಪೂರ್ತಿಗೊಳಿಸಿಕೊಟ್ಟ ಕಾಂಟ್ರಾಕ್ಟರಾದ ರಿಯಾಝ್ ಪಾದೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾದ ಬಿ.ಎಂ. ಅಬ್ದುಲ್ ಹಮೀದ್ ಹಾಜಿ, ಕಾರ್ಯದರ್ಶಿ ಮಹಮ್ಮದ್ ಕೆ.ಎಸ್.ಆರ್.ಟಿ.ಸಿ., ಖತೀಬರಾದ ಮಹಮ್ಮದ್ ಶರೀಫ್ ಸಖಾಫಿ, ಅಧ್ಯಾಪಕರಾದ ಸೈಫುದ್ಧೀನ್ ಹಾಸಿಮಿ, ಎಲ್ಲಾ ಕರಿಯದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು. ಸದರ್ ಉಸ್ತಾದರಾದ ಉಮರುಲ್ ಫಾರೂಕ್ ಸಅದಿ ಸ್ವಾಗತ ನೆರವೇರಿಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ಮುಗ್ಗ ಗುತ್ತಿನ ಮನೆತನದ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!