July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

ಶಿಶಿಲ : ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಗಿರಿಜಾ. ಯಸ್ ಇವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ರೇಣುಕಾ ಸುಧೀರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಜಯಾನಂದ್ ರವರು ಕಾರ್ಯಕ್ರಮ ದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ತಾಲೂಕು ವ್ಯವಸ್ಥಾಪಕರಾದ ನಿತೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಮಹತ್ವ ಹಾಗೂ ಎನ್.ಆರ್.ಎಲ್.ಎಮ್ ಯೋಜನೆಯ ಬಗ್ಗೆ ಸಾವಿಸ್ತಾರವಾದ ಮಾಹಿತಿ ನೀಡಿದರು.

ಕಾರ್ಯಕ್ರಮ ಉದ್ಘಾಟನೆ ಮಾಡಿದ ರೇಣುಕಾ ರವರು ಆಟಿ ತಿಂಗಳಲ್ಲಿ ಮಾಡಬಹುದಾದ ಕಾರ್ಯಗಳ ಬಗ್ಗೆ ಮತ್ತು ಪರಿಸರದಲ್ಲಿ ಸಿಗುವ ವಿವಿಧ ರೀತಿಯ ಪೌಷ್ಟಿಕಾಂಶ ಸೊಪ್ಪುಗಳನ್ನು ಬಳಸಿ ಖಾದ್ಯ ಗಳನ್ನು ತಯಾರಿಸಿ ತಿನ್ನುವುದರಿಂದ ನಮ್ಮ ದೇಹಕ್ಕೆ ಆಗುವ ಪ್ರಯೋಜನಗಳ ಬಗ್ಗೆ ಸುದೀರ್ಘವಾಗಿ ವಿವರಿಸಿದರು. ಗ್ರಾಮದ ಸಿಹೆಚ್.ಒ ಪವಿತ್ರಾ ರವರು ಮಹಿಳೆಯರ ಆರೋಗ್ಯದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಸದಸ್ಯೆಯರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಜೊತೆಗೆ ಸದಸ್ಯೆಯರು ಸುಮಾರು 72ಕ್ಕೂ ಹೆಚ್ಚಿನ ವೈವಿಧ್ಯಮಯ ಖಾದ್ಯಗಳನ್ನು ತಯಾರಿಸಿ ತಂದಿದ್ದರು. ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಸದಸ್ಯೆಯರು ಸಂಧಿ ಪಾದ್ದನ ಹೇಳಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಕೊಕ್ಕಡ ವಲಯ ಮೇಲ್ವಿಚಾರಕಿ ವೀಣಾಶ್ರೀ , ಹತ್ಯಡ್ಕ ಬ್ಯಾಂಕ್ ನ ನಿರ್ದೇಶಕರು ತಾರಾ, ಪಂಚಾಯತ್ ಸದಸ್ಯೆ ಲಲಿತ, ಸುಗುಣ ಕುಮಾರಿ, ಗ್ರಾಮ ಆಡಳಿತಾಧಿಕಾರಿ ತೇಜಸ್ವಿನಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆಯರು ಆಶಾಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಕೃಷಿ ಸಖಿ ವಸಂತಿ ಯವರು ಪ್ರಾರ್ಥನೆಯನ್ನು ಹಾಡಿದರು. ಎಮ್.ಬಿ.ಕೆ ಶಾರದಾ ಸ್ವಾಗತಿಸಿದರು. ಪಶು ಸಖಿ ಎಲ್.ಸಿಆರ್.ಪಿ ಗಳು ಒಕ್ಕೂಟದ ಪದಾಧಿಕಾರಿಗಳು, ಸಂಜೀವಿನಿ ಒಕ್ಕೂಟದ 100ಕ್ಕೂ ಹೆಚ್ಚು ಸದಸ್ಯೆ ಯರು ಭಾಗವಹಿಸಿದ್ದರು.

Related posts

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ ಅಯೋಧ್ಯೆ ಶಾಖಾಮಠದ ನಿರ್ಮಾಣ ಕೆಲಸ ಕಾರ್ಯಗಳು

Suddi Udaya

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya
error: Content is protected !!