30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಉಜಿರೆ: ಎಸ್.ಡಿ.ಎಂ.ಕಾಲೇಜು ಉಜಿರೆ,ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸುವರ್ಣ ಸಂಭ್ರಮಾಚರಣೆ,ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳು ಉಜಿರೆ,ರೋಟರಿ ಕ್ಲಬ್ ಬೆಳ್ತಂಗಡಿ, ಪತ್ರಕರ್ತರ ಸಂಘ ಬೆಳ್ತಂಗಡಿ, ಎಸ್.ಡಿ.ಎಂ.ಮಲ್ಟಿ ಹಾಸ್ಪಿಟಲ್ ಉಜಿರೆ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಆ. 18 ರಂದು ನಡೆಯಿತು.

ರಕ್ತದಾನ ಶಿಬಿರದ ಉದ್ಘಾಟನೆಯನ್ನು ಸಿರಿ ಸಂಸ್ಥೆಯ ವ್ಯವಸ್ಥಾಪನಾ ನಿರ್ದೇಶಕ ಕೆ.ಎಮ್ ಜನಾರ್ಧನಾ ನೇರವೇರಿಸಿ ರಕ್ತದಾನ ಮಾಡುವುದರಿಂದ ವ್ಯಕ್ತಿಯ ಜೀವ ಉಳಿಸಿದ ಭಾವನೆ ಜತೆಯಲ್ಲಿ ದಾನಿಯ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎ ಕುಮಾರ ಹೆಗ್ಡೆ ವಹಿಸಿ ಮಾತನಾಡಿ ಜೀವವನ್ನು ಉಳಿಸಲು ನಾವು ವೈದ್ಯರಾಗಬೇಕಿಲ್ಲ, ರಕ್ತದಾನ ಮಾಡಿದರೆ ಸಾಕು, ರಕ್ತದಾನ ಮಾಡಿ ಜೀವ ಉಳಿಸಿದ ಸಂತೃಪ್ತಿ ಹೊಂದಬಹುದು ಎಂದರು.

ಮುಖ್ಯ ಅತಿಥಿಗಳಾಗಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ಧನ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ,ಯೋಜನಾಧಿಕಾರಿ ಸುರೇಂದ್ರ,ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್,ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಾದ ಅಕ್ಷರ ಪ್ರಿಂಟರ್ಸ್ ಮಾಲಕ ಅನಿಲ್ ಕುಮಾರ್ ಶಿಬಾಜೆ,ಯೂಪ್ಲಸ್ ಚಾನೆಲ್ ಮುಖ್ಯಸ್ಥ ದಿನೇಶ್ ಕೋಟ್ಯಾನ್ ,ಪ್ರಮುಖರಾದ ರಾಘವೇಂದ್ರ ನಿಡಿಗಲ್ರಶ್ಮಿ ಸ್ಟುಡಿಯೋ ಮಾಲಕ ರಾಮಕೃಷ್ಣ ರೈ,ಯಶೋಧರ ನಾಯ್ಕ್ ಇವರನ್ನು ಸನ್ಮಾನಿಸಲಾಯಿತು.

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸುರಕ್ಷಾ ಮೆಡಿಕಲ್ ನ ಶ್ರೀಧರ್ ಕೆ.ವಿ ವಂದಿಸಿದರು.ತಿಮ್ಮಯ್ಯ ನಾಯ್ಕ ಮತ್ತು ಸಮೀಕ್ಷಾ ಶಿರ್ಲಾಲು ನಿರೂಪಿಸಿದರು.ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಡಾ.ಮಹೇಶ್ ಕುಮಾರ್ ಶೆಟ್ಟಿ ಹೆಚ್,ದೀಪಾ ಆರ್.ಪಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಹಕರಿಸಿದರು.

Related posts

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಪ್ರಬಂಧ ಸ್ಪರ್ಧೆ: ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!