25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಬೆಳ್ತಂಗಡಿಯ 77 ಮೊಹಲ್ಲಾಗಳ ಖಾಝಿಯಾಗಿ ಎ.ಪಿ ಉಸ್ತಾದ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಅಧಿಕಾರ ಅಥವಾ ಅವಕಾಶಗಳು ಕೇಳಿ ಪಡೆಯದೆ ಅದಾಗಿ ಒಲಿದು ಬಂದರೆ ದೇವರ ಕಡೆಯಿಂದ ಮತ್ತು ಜನರ ಕಡೆಯಿಂದ ಸಹಕಾರ ತನ್ನಿಂತಾನೇ ಹರಿದು ಬರಲಿದೆ ಎಂದು ದೇವರು ಪ್ರವಾದಿಯವರ ಮೂಲಕ ತಿಳಿಸಿಕೊಟ್ಟಿದ್ದಾರೆ. ಅಲ್ಲಾಹನ ಧರ್ಮ ಕಾರ್ಯ ಅಳಿಇಲ್ಲದೆ ನಡೆಯಬೇಕೆಂಬ ಉದ್ದೇಶದಿಂದ ನಿಮ್ಮೆಲ್ಲರ ಅಪೇಕ್ಷೆಯಂತೆ ತಾಲೂಕಿನ ಜಮಾಅತ್ ಗಳ ಖಾಝಿ ಯಾಗಿ ನಾನು ಅಧಿಕಾರ ವಹಿಸಿಕೊಂಡಿದ್ದೇನೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ, ವಿಶ್ವದರ್ಜೆಯ ಧಾರ್ಮಿಕ ವಿದ್ವಾಂಸ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರ ಹೇಳಿದರು.

ಸಂಯುಕ್ತ ಜಮಾಅತ್ ಬೆಳ್ತಂಗಡಿ ವತಿಯಿಂದ ಗುರುವಾಯನಕೆರೆ ಎಫ್.ಎಂ ಗಾರ್ಡನ್ ನಲ್ಲಿ ನಡೆದ ತಾಲೂಕಿನ 77 ಮೊಹಲ್ಲಾಗಳ ಖಾಝಿಯಾಗಿ ಅಧಿಕಾರ ಪದ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ವಹಿಸಿದ್ದರು.
ಸಯ್ಯಿದ್ ಸಾದಾತ್ ತಂಙಳ್ ಪ್ರಸ್ತಾವನೆಗೈದರು. ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ಪಝಲ್ ಜಮಲುಲ್ಲೈಲಿ ತಂಙಳ್ ಸಬರಬೈಲು, ಸಯ್ಯಿದ್ ಸಿಟಿಎಂ ಉಮರ್ ಅಸ್ಸಖಾಫ್ ತಂಙಳ್ ಮನ್ಶರ್, ಅಬ್ದುಸ್ಸಲಾಂ ತಂಙಳ್ ಪುಂಜಾಲಕಟ್ಟೆ, ಸಯ್ಯಿದ್ ಅಲವಿ ಜಲಾಲುದ್ದೀನ್ ತಂಙಳ್ ಮಲ್‌ಜ‌ಅ, ಹಝ್ರತ್ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ, ಸಯ್ಯಿದ್ ಮಸ್‌ಊದ್ ತಂಙಳ್ ಕಾರ್ಯಕ್ರಮಕ್ಕೆ ದಿವ್ಯ ಸಾನಿದ್ಯ ನೀಡಿದರು.

ಕರ್ನಾಟಕ‌ ಉಲಮಾ ಒಕ್ಕೂಟದ ಅಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದ್ ಸಮಾವೇಶ ಉದ್ಘಾಟಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿ ರೋಡ್ ಹುಸೈನ್ ಸ‌ಅದಿ ಕೂರತ್‌ ತಂಙಳ್ ಅನುಸ್ಮರಣಾ ಸಂದೇಶ ನೀಡಿದರು. ಮರ್ಕಝ್ ನಾಲೆಡ್ಜ್ ಸಿಟಿ ಆಡಳಿತ ನಿರ್ದೇಶಕ ಡಾ. ಹಕೀಂ ಅಝ್ಹರಿ ಕಾಂತಪುರ ಸಾಂದರ್ಭಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ವಕ್ಫ್ ಮಂಡಳಿ ನಿಕಟಪೂರ್ವ ರಾಜ್ಯಾಧ್ಯಕ್ಷ ಶಾಫಿ ಸ‌ಅದಿ ಬೆಂಗಳೂರು, ವಿದ್ವಾಂಸರುಗಳಾದ ಹೈದರ್ ಮದನಿ ಕರಾಯ, ಕಾಸಿಂ ಮದನಿ ಕರಾಯ, ಪಣಕಜೆ ಉಸ್ತಾದ್, ಕೆ.ಯು ಉಮರ್ ಸಖಾಫಿ ಕಾಜೂರು, ಆದಂ ಅಹ್ಸನಿ, ಪಿ.ಕೆ ಉಸ್ತಾದ್, ಕುಂಞಬ್ದುಲ್ಲ ದಾರಿಮಿ, ಪ್ರಮುಖರಾದ ಶಾಕಿರ್ ಹಾಜಿ, ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ವಕ್ಫ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಮೊಗರ್ಪಣೆ, ಸದಸ್ಯ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಹಾಗೂ ಸಂಯುಕ್ತ ಜಮಾಅತ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರತೀ‌ ಜಮಾಅತ್ ಗಳಿಂದ ಅಧ್ಯಕ್ಷ ಕಾರ್ಯದರ್ಶಿಗಳು ಭಾಗಿಯಾಗಿ ಖಾಝಿ ಅಧಿಕಾರ ವಾಗ್ದಾನ ಮಾಡಿದರು. ಬಳಿಕ ಎಪಿ ಉಸ್ತಾದ್ ಅವರನ್ನು ನಿಲುವಂಗಿ ತೊಡಿಸಿ ಪೇಠ ಧರಿಸಿ ಗೌರವಿಸಲಾಯಿತು. ಖಾಝಿ ಸ್ವೀಕರಿಸಿದ ಜಮಾಅತ್ ಗಳಿಗೆ ಪ್ರಮಾಣಪತ್ರವನ್ನುವಿತರಿಸಲಾಯಿತು. ಸಂಯುಕ್ತ ಜಮಾಅತ್ ಕಾರ್ಯದರ್ಶಿ ಅಬ್ದುಲ್ ರಝಾಕ್ ಸಖಾಫಿ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಅಶ್ರಫ್ ಸಖಾಫಿ ಅನುಸ್ಮರಣಾ ಭಾಷಣ ಮಾಡಿದರು.

Related posts

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya
error: Content is protected !!