25.5 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕ

ಬೆಳ್ತಂಗಡಿಯ 77 ಮೊಹಲ್ಲಾಗಳ ಖಾಝಿಯಾಗಿ ಎ.ಪಿ ಉಸ್ತಾದ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಅಧಿಕಾರ ಅಥವಾ ಅವಕಾಶಗಳು ಕೇಳಿ ಪಡೆಯದೆ ಅದಾಗಿ ಒಲಿದು ಬಂದರೆ ದೇವರ ಕಡೆಯಿಂದ ಮತ್ತು ಜನರ ಕಡೆಯಿಂದ ಸಹಕಾರ ತನ್ನಿಂತಾನೇ ಹರಿದು ಬರಲಿದೆ ಎಂದು ದೇವರು ಪ್ರವಾದಿಯವರ ಮೂಲಕ ತಿಳಿಸಿಕೊಟ್ಟಿದ್ದಾರೆ. ಅಲ್ಲಾಹನ ಧರ್ಮ ಕಾರ್ಯ ಅಳಿಇಲ್ಲದೆ ನಡೆಯಬೇಕೆಂಬ ಉದ್ದೇಶದಿಂದ ನಿಮ್ಮೆಲ್ಲರ ಅಪೇಕ್ಷೆಯಂತೆ ತಾಲೂಕಿನ ಜಮಾಅತ್ ಗಳ ಖಾಝಿ ಯಾಗಿ ನಾನು ಅಧಿಕಾರ ವಹಿಸಿಕೊಂಡಿದ್ದೇನೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ, ವಿಶ್ವದರ್ಜೆಯ ಧಾರ್ಮಿಕ ವಿದ್ವಾಂಸ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರ ಹೇಳಿದರು.

ಸಂಯುಕ್ತ ಜಮಾಅತ್ ಬೆಳ್ತಂಗಡಿ ವತಿಯಿಂದ ಗುರುವಾಯನಕೆರೆ ಎಫ್.ಎಂ ಗಾರ್ಡನ್ ನಲ್ಲಿ ನಡೆದ ತಾಲೂಕಿನ 77 ಮೊಹಲ್ಲಾಗಳ ಖಾಝಿಯಾಗಿ ಅಧಿಕಾರ ಪದ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ವಹಿಸಿದ್ದರು.
ಸಯ್ಯಿದ್ ಸಾದಾತ್ ತಂಙಳ್ ಪ್ರಸ್ತಾವನೆಗೈದರು. ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ಪಝಲ್ ಜಮಲುಲ್ಲೈಲಿ ತಂಙಳ್ ಸಬರಬೈಲು, ಸಯ್ಯಿದ್ ಸಿಟಿಎಂ ಉಮರ್ ಅಸ್ಸಖಾಫ್ ತಂಙಳ್ ಮನ್ಶರ್, ಅಬ್ದುಸ್ಸಲಾಂ ತಂಙಳ್ ಪುಂಜಾಲಕಟ್ಟೆ, ಸಯ್ಯಿದ್ ಅಲವಿ ಜಲಾಲುದ್ದೀನ್ ತಂಙಳ್ ಮಲ್‌ಜ‌ಅ, ಹಝ್ರತ್ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ, ಸಯ್ಯಿದ್ ಮಸ್‌ಊದ್ ತಂಙಳ್ ಕಾರ್ಯಕ್ರಮಕ್ಕೆ ದಿವ್ಯ ಸಾನಿದ್ಯ ನೀಡಿದರು.

ಕರ್ನಾಟಕ‌ ಉಲಮಾ ಒಕ್ಕೂಟದ ಅಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದ್ ಸಮಾವೇಶ ಉದ್ಘಾಟಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿ ರೋಡ್ ಹುಸೈನ್ ಸ‌ಅದಿ ಕೂರತ್‌ ತಂಙಳ್ ಅನುಸ್ಮರಣಾ ಸಂದೇಶ ನೀಡಿದರು. ಮರ್ಕಝ್ ನಾಲೆಡ್ಜ್ ಸಿಟಿ ಆಡಳಿತ ನಿರ್ದೇಶಕ ಡಾ. ಹಕೀಂ ಅಝ್ಹರಿ ಕಾಂತಪುರ ಸಾಂದರ್ಭಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ವಕ್ಫ್ ಮಂಡಳಿ ನಿಕಟಪೂರ್ವ ರಾಜ್ಯಾಧ್ಯಕ್ಷ ಶಾಫಿ ಸ‌ಅದಿ ಬೆಂಗಳೂರು, ವಿದ್ವಾಂಸರುಗಳಾದ ಹೈದರ್ ಮದನಿ ಕರಾಯ, ಕಾಸಿಂ ಮದನಿ ಕರಾಯ, ಪಣಕಜೆ ಉಸ್ತಾದ್, ಕೆ.ಯು ಉಮರ್ ಸಖಾಫಿ ಕಾಜೂರು, ಆದಂ ಅಹ್ಸನಿ, ಪಿ.ಕೆ ಉಸ್ತಾದ್, ಕುಂಞಬ್ದುಲ್ಲ ದಾರಿಮಿ, ಪ್ರಮುಖರಾದ ಶಾಕಿರ್ ಹಾಜಿ, ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ವಕ್ಫ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಮೊಗರ್ಪಣೆ, ಸದಸ್ಯ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಹಾಗೂ ಸಂಯುಕ್ತ ಜಮಾಅತ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರತೀ‌ ಜಮಾಅತ್ ಗಳಿಂದ ಅಧ್ಯಕ್ಷ ಕಾರ್ಯದರ್ಶಿಗಳು ಭಾಗಿಯಾಗಿ ಖಾಝಿ ಅಧಿಕಾರ ವಾಗ್ದಾನ ಮಾಡಿದರು. ಬಳಿಕ ಎಪಿ ಉಸ್ತಾದ್ ಅವರನ್ನು ನಿಲುವಂಗಿ ತೊಡಿಸಿ ಪೇಠ ಧರಿಸಿ ಗೌರವಿಸಲಾಯಿತು. ಖಾಝಿ ಸ್ವೀಕರಿಸಿದ ಜಮಾಅತ್ ಗಳಿಗೆ ಪ್ರಮಾಣಪತ್ರವನ್ನುವಿತರಿಸಲಾಯಿತು. ಸಂಯುಕ್ತ ಜಮಾಅತ್ ಕಾರ್ಯದರ್ಶಿ ಅಬ್ದುಲ್ ರಝಾಕ್ ಸಖಾಫಿ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಅಶ್ರಫ್ ಸಖಾಫಿ ಅನುಸ್ಮರಣಾ ಭಾಷಣ ಮಾಡಿದರು.

Related posts

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಸತ್ಸಂಗ”

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!