28 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಅಳದಂಗಡಿ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುದ್ಯಾಡಿ ಜನಜಾಗೃತಿ ಗ್ರಾಮ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಪದಗ್ರಹಣ ಸಮಾರಂಭವು ಕುದ್ಯಾಡಿ ಶಾಲಾ ವಠಾರದಲ್ಲಿ ಆ. 18 ರಂದು ಜರಗಿತು.


ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ವಿಶ್ವನಾಥ ಪೂಜಾರಿ ಕುದ್ಯಾಡಿ ಗುತ್ತು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಸಭೆಯ ಅಧ್ಯಕ್ಷರಾದ ಶ್ರೀಮತಿ ತಾರಾ, ಅಳದಂಗಡಿ ಯೋಜನಾ ಮೇಲ್ವಿಚಾರಕರು ಸುಮಂಗಲ., ಸದ್ಧರ್ಮ ಯುವಕ ಮಂಡಲ ಅಧ್ಯಕ್ಷ ಸದಾನಂದ ಪೂಜಾರಿ, ಗ್ರಾಮ ಪಂಚಾಯಿತಿ ಸದಸ್ಯರಾದ ಯಶೋಧ ಎಲ್ ಬಂಗೇರ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಂತಿ ಸಿ ಪೂಜಾರಿ, ನವ ಜೀವನ ಸಮಿತಿ ಅಧ್ಯಕ್ಷರಾದ ಪ್ರವೀಣ್ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷ ರಾಮಪ್ಪ ಕುಲೆಚ್ಚಾವು, ಒಕ್ಕೂಟ ಕಾರ್ಯದರ್ಶಿಯಾದ ಪೂರ್ಣಿಮಾ, ಜೊತೆ ಕಾರ್ಯದರ್ಶಿಗಳಾದ ಜನಿತ ಶೆಟ್ಟಿ ಉಪಸ್ಥಿತರಿದ್ದರು.


ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರು ಪದಾಧಿಕಾರಿಗಳಿಗೆ ಪುಸ್ತಕ ಹಸ್ತಾಂತರ ಮಾಡಲಾಯಿತು.
ಕುದ್ಯಾಡಿ ಒಕ್ಕೂಟದಲ್ಲಿ ಪ್ರಾರಂಭಿಸುವಾಗ ಇರುವಂತ ನಾಲ್ಕು ಮಂದಿ ಹಿರಿಯರನ್ನು ಗೌರವಿಸಲಾಯಿತು.
ಮೂರು ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಇಬ್ಬರು ನವಜೀವನ ಸಮಿತಿಯ ಫಲಾನುಭವಿಗಳನ್ನು ಸನ್ಮಾನಿಸಲಾಯಿತು.
ಪೂರ್ಣಿಮಾ ದರ್ಕಾಸು ಪ್ರಾರ್ಥನೆ ಮಾಡಿದರು. ಸೇವಾ ಪ್ರತಿನಿಧಿಯಾದ ಮಮತಾ ಶುಭಕರ ಪೂಜಾರಿ ವರದಿ ವಾಚಿಸಿದರು. ಶುಭಾಕರ ಪೂಜಾರಿ ಸ್ವಾಗತಿಸಿದರು. ದಿನೇಶ್ ಬಿರ್ಮಜರಿ ಧನ್ಯವಾದವಿತ್ತರು.

Related posts

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ