23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಅಳದಂಗಡಿ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುದ್ಯಾಡಿ ಜನಜಾಗೃತಿ ಗ್ರಾಮ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಪದಗ್ರಹಣ ಸಮಾರಂಭವು ಕುದ್ಯಾಡಿ ಶಾಲಾ ವಠಾರದಲ್ಲಿ ಆ. 18 ರಂದು ಜರಗಿತು.


ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ವಿಶ್ವನಾಥ ಪೂಜಾರಿ ಕುದ್ಯಾಡಿ ಗುತ್ತು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಸಭೆಯ ಅಧ್ಯಕ್ಷರಾದ ಶ್ರೀಮತಿ ತಾರಾ, ಅಳದಂಗಡಿ ಯೋಜನಾ ಮೇಲ್ವಿಚಾರಕರು ಸುಮಂಗಲ., ಸದ್ಧರ್ಮ ಯುವಕ ಮಂಡಲ ಅಧ್ಯಕ್ಷ ಸದಾನಂದ ಪೂಜಾರಿ, ಗ್ರಾಮ ಪಂಚಾಯಿತಿ ಸದಸ್ಯರಾದ ಯಶೋಧ ಎಲ್ ಬಂಗೇರ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಂತಿ ಸಿ ಪೂಜಾರಿ, ನವ ಜೀವನ ಸಮಿತಿ ಅಧ್ಯಕ್ಷರಾದ ಪ್ರವೀಣ್ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷ ರಾಮಪ್ಪ ಕುಲೆಚ್ಚಾವು, ಒಕ್ಕೂಟ ಕಾರ್ಯದರ್ಶಿಯಾದ ಪೂರ್ಣಿಮಾ, ಜೊತೆ ಕಾರ್ಯದರ್ಶಿಗಳಾದ ಜನಿತ ಶೆಟ್ಟಿ ಉಪಸ್ಥಿತರಿದ್ದರು.


ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರು ಪದಾಧಿಕಾರಿಗಳಿಗೆ ಪುಸ್ತಕ ಹಸ್ತಾಂತರ ಮಾಡಲಾಯಿತು.
ಕುದ್ಯಾಡಿ ಒಕ್ಕೂಟದಲ್ಲಿ ಪ್ರಾರಂಭಿಸುವಾಗ ಇರುವಂತ ನಾಲ್ಕು ಮಂದಿ ಹಿರಿಯರನ್ನು ಗೌರವಿಸಲಾಯಿತು.
ಮೂರು ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಇಬ್ಬರು ನವಜೀವನ ಸಮಿತಿಯ ಫಲಾನುಭವಿಗಳನ್ನು ಸನ್ಮಾನಿಸಲಾಯಿತು.
ಪೂರ್ಣಿಮಾ ದರ್ಕಾಸು ಪ್ರಾರ್ಥನೆ ಮಾಡಿದರು. ಸೇವಾ ಪ್ರತಿನಿಧಿಯಾದ ಮಮತಾ ಶುಭಕರ ಪೂಜಾರಿ ವರದಿ ವಾಚಿಸಿದರು. ಶುಭಾಕರ ಪೂಜಾರಿ ಸ್ವಾಗತಿಸಿದರು. ದಿನೇಶ್ ಬಿರ್ಮಜರಿ ಧನ್ಯವಾದವಿತ್ತರು.

Related posts

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya
error: Content is protected !!