July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವವು ಆ.20ರಿಂದ ಆ.22 ರವರೆಗೆ ನಡೆಯಲಿದೆ.


ಆ.20 ರಂದು ಬೆಳಿಗ್ಗೆ 9 ಕ್ಕೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು ಪುತ್ತೂರು ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್ ರವರಿಂದ ದೀಪ ಪ್ರಜ್ವಲನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಲಾಯಿಲ ಗ್ರಾ.ಪಂ. ಅಧ್ಯಕ್ಷೆ ಜಯಂತಿ ಎಮ್.ಕೆ ಭಾಗವಹಿಸಲಿದ್ದಾರೆ.
ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಆ.21 ರಂದು ಸಭಾಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ ವರ್ಮ, ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ನಾರಾಯಣ ಬೇಗೂರು ಬೆಂಗಳೂರು ಭಾಗವಹಿಸಲಿದ್ದಾರೆ. ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ರವರಿಗೆ ಗೌರವಾರ್ಪಣೆ ನಡೆಯಲಿದೆ. ಬೆಳಿಗ್ಗೆ ಗಂಟೆ ೧೦.೦೦ಕ್ಕೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ9 ರಿಂದ ತುಳು ಹಾಸ್ಯಮಯ ನಾಟಕ ಬೇಗ ಬಲ ಬಾಲೆ ನಾಟಕ ನಡೆಯಲಿದೆ.


ಆ.22 ರಂದು ಬೆಳಿಗ್ಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಭಕ್ತಿ ರಸಮಂಜರಿ, ಕುಣಿತ ಭಜನೆ ನಡೆಯಲಿದೆ ಎಂದು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ತಿಳಿಸಿದ್ದಾರೆ.

Related posts

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya
error: Content is protected !!