23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವವು ಆ.20ರಿಂದ ಆ.22 ರವರೆಗೆ ನಡೆಯಲಿದೆ.


ಆ.20 ರಂದು ಬೆಳಿಗ್ಗೆ 9 ಕ್ಕೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು ಪುತ್ತೂರು ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್ ರವರಿಂದ ದೀಪ ಪ್ರಜ್ವಲನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಲಾಯಿಲ ಗ್ರಾ.ಪಂ. ಅಧ್ಯಕ್ಷೆ ಜಯಂತಿ ಎಮ್.ಕೆ ಭಾಗವಹಿಸಲಿದ್ದಾರೆ.
ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಆ.21 ರಂದು ಸಭಾಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ ವರ್ಮ, ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ನಾರಾಯಣ ಬೇಗೂರು ಬೆಂಗಳೂರು ಭಾಗವಹಿಸಲಿದ್ದಾರೆ. ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ರವರಿಗೆ ಗೌರವಾರ್ಪಣೆ ನಡೆಯಲಿದೆ. ಬೆಳಿಗ್ಗೆ ಗಂಟೆ ೧೦.೦೦ಕ್ಕೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ9 ರಿಂದ ತುಳು ಹಾಸ್ಯಮಯ ನಾಟಕ ಬೇಗ ಬಲ ಬಾಲೆ ನಾಟಕ ನಡೆಯಲಿದೆ.


ಆ.22 ರಂದು ಬೆಳಿಗ್ಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಭಕ್ತಿ ರಸಮಂಜರಿ, ಕುಣಿತ ಭಜನೆ ನಡೆಯಲಿದೆ ಎಂದು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ತಿಳಿಸಿದ್ದಾರೆ.

Related posts

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

Suddi Udaya

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya
error: Content is protected !!